Featured

ಕಾಪು ಶಾಸಕ ಸುರೇಶ್ ಶೆಟ್ಟಿ ವಿರುದ್ಧ ಮತ್ತೆ ಕಿಡಿಕಾರಿದ ಸೊರಕೆ : vishwanews24

ಕಾಪು ಶಾಸಕ ಸುರೇಶ್ ಶೆಟ್ಟಿ ವಿರುದ್ಧ ಮತ್ತೆ ಕಿಡಿಕಾರಿದ ಸೊರಕೆ :vishwanews24

ಅರವತ್ತೊಂಭತ್ತು ಸಾವಿರ ಜನ ನನಗೂ ಮತ ಹಾಕಿದ್ದಾರೆ ಅವರ ಸೇವೆ ನನ್ನ ಕರ್ತವ್ಯ

ಹಕ್ಕುಚ್ಯುತಿಯ ಬೆದರಿಕೆ ನಾನು ಬಗ್ಗುವುದಿಲ್ಲ : ಸೊರಕೆ

ಕಾಪು : ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ ಆದರೆ ಅರವತ್ತೊಂಭತ್ತು ಸಾವಿರ ಮತ ಹಾಕಿದ ಜನರ ಸೇವೆ ಮಾಡಿದರೆ ಇದು ಹಕ್ಕುಚ್ಯುತಿ ಎಂದು ವಾದ ಮಂಡಿಸುವ ಶಾಸಕರ ವಿರುಧ್ಧ ಅಸಾಮಾಧಾನವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ‌ ಹೇಳಿದ್ದಾರೆ.

ಅವರು ಕಾಪು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶಾಸಕರು ನಮಗೆ ಎಲ್ಲ ರೀತಿಯಲ್ಲೂ ಅವಕಾಶ ಮಾಡಿಕೊಡುತ್ತಿದ್ದಾರೆ, ಅದನ್ನು ನಾವು ಬಳಸಿಕೊಳ್ಳುತ್ತಿದ್ದೇವ,ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ ನಮಗೆ ದಾರಿ ತೋರಿಸಿ ಕೊಟ್ಟಿದ್ದರು,ಅವರು ನೀಡಿದ ಅವಕಾಶವನ್ನು ಬಳಸಿಕೊಂಡು ನಾವು ಕೂಡಾ ಪ್ರತಿಭಟನೆ ನಡೆಸಿದ್ದೇವೆ. ಜನರ ಮುಂದೆ ಸತ್ಯದರ್ಶನ ಮಾಡಿಸಿಕೊಟ್ಟಿದ್ದೇವೆ ಎಂದರು.

ನಾನು ಯಾವಾತ್ತಿಗೂ ಶಾಸಕರ ಮಗನ ವಿಚಾರ ಉಲ್ಲೇಖ ಮಾಡಿಲ್ಲ ಹಾಗಂತ ಲೈಸನ್ಸ್ ಇದ್ದವರೆ ಕಾಂಟ್ಯಾಕ್ಟ್ ಕೆಲಸ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಕಾಪು ಹೊಸಮಾರಿಗುಡಿ ವಿಚಾರದಲ್ಲಿ ನಾನು ಕೂಡ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಸಂಬಂಧ ಪಟ್ಟ ಎಲ್ಲಾ ಸಚಿವರಿಗೆ ,ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ,ನಮ್ದು ಆಂತರಿಕ ಒಳಜಗಲದಿಂದ ಇದೆಲ್ಲ ಆಗಿದೆ ಎಂದಾದರೇ ನಮ್ಮ ನಿಯೋಗದ ಜತೆ ಬಂದ ಅವರದೇ ಸಮಾಜದ ನಾಯಕನಿಗೆ ಶಾಸಕರು ಕರೆ ಮಾತಾಡಿರುವುದು ಯಾಕೆ ಎಂದು ಮರುಪ್ರಶ್ನೆ ಮಾಡಿದರು.

ಕಾಪು ಶಾಸಕರು ರಾಜ್ಯ ಸರಕಾರವು ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅವರಿಗೆ ಶಾಸಕರ ನಿಧಿ, ಅಲ್ಪಸಂಖ್ಯಾತರ ನಿಧಿ, ಲೋಕೋಪಯೋಗಿ ಇಲಾಖೆ ಸಹಿತ ಇತರ ಇಲಾಖೆಗಳ ಅನುದಾನ ಹಾಗೂ ತಾ.ಪಂ., ಜಿ. ಪಂ., ನಿಧಿಯೂ ಸಿಕ್ಕಿದೆ. ಆದರೂ ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಸೊರಕೆ ಮಾತಿನಲ್ಲಿ ಕುಟುಕಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಂಗ್ರೆಸ್‌ ಮುಖಂಡರುಗಳಾದ ಕಾಪು ದಿವಾಕರ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಜಿತೇಂದ್ರ ಪುರ್ಟಾಡೋ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಝ್, ಶರ್ಪುದ್ದೀನ್ ಶೇಖ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago