Featured

ಕಾಪು ಶಾಸಕ ಸುರೇಶ್ ಶೆಟ್ಟಿ ವಿರುದ್ಧ ಮತ್ತೆ ಕಿಡಿಕಾರಿದ ಸೊರಕೆ : vishwanews24

ಕಾಪು ಶಾಸಕ ಸುರೇಶ್ ಶೆಟ್ಟಿ ವಿರುದ್ಧ ಮತ್ತೆ ಕಿಡಿಕಾರಿದ ಸೊರಕೆ :vishwanews24

ಅರವತ್ತೊಂಭತ್ತು ಸಾವಿರ ಜನ ನನಗೂ ಮತ ಹಾಕಿದ್ದಾರೆ ಅವರ ಸೇವೆ ನನ್ನ ಕರ್ತವ್ಯ

ಹಕ್ಕುಚ್ಯುತಿಯ ಬೆದರಿಕೆ ನಾನು ಬಗ್ಗುವುದಿಲ್ಲ : ಸೊರಕೆ

ಕಾಪು : ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ ಆದರೆ ಅರವತ್ತೊಂಭತ್ತು ಸಾವಿರ ಮತ ಹಾಕಿದ ಜನರ ಸೇವೆ ಮಾಡಿದರೆ ಇದು ಹಕ್ಕುಚ್ಯುತಿ ಎಂದು ವಾದ ಮಂಡಿಸುವ ಶಾಸಕರ ವಿರುಧ್ಧ ಅಸಾಮಾಧಾನವಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ‌ ಹೇಳಿದ್ದಾರೆ.

ಅವರು ಕಾಪು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಶಾಸಕರು ನಮಗೆ ಎಲ್ಲ ರೀತಿಯಲ್ಲೂ ಅವಕಾಶ ಮಾಡಿಕೊಡುತ್ತಿದ್ದಾರೆ, ಅದನ್ನು ನಾವು ಬಳಸಿಕೊಳ್ಳುತ್ತಿದ್ದೇವ,ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ ನಮಗೆ ದಾರಿ ತೋರಿಸಿ ಕೊಟ್ಟಿದ್ದರು,ಅವರು ನೀಡಿದ ಅವಕಾಶವನ್ನು ಬಳಸಿಕೊಂಡು ನಾವು ಕೂಡಾ ಪ್ರತಿಭಟನೆ ನಡೆಸಿದ್ದೇವೆ. ಜನರ ಮುಂದೆ ಸತ್ಯದರ್ಶನ ಮಾಡಿಸಿಕೊಟ್ಟಿದ್ದೇವೆ ಎಂದರು.

ನಾನು ಯಾವಾತ್ತಿಗೂ ಶಾಸಕರ ಮಗನ ವಿಚಾರ ಉಲ್ಲೇಖ ಮಾಡಿಲ್ಲ ಹಾಗಂತ ಲೈಸನ್ಸ್ ಇದ್ದವರೆ ಕಾಂಟ್ಯಾಕ್ಟ್ ಕೆಲಸ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ಕಾಪು ಹೊಸಮಾರಿಗುಡಿ ವಿಚಾರದಲ್ಲಿ ನಾನು ಕೂಡ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಸಂಬಂಧ ಪಟ್ಟ ಎಲ್ಲಾ ಸಚಿವರಿಗೆ ,ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ,ನಮ್ದು ಆಂತರಿಕ ಒಳಜಗಲದಿಂದ ಇದೆಲ್ಲ ಆಗಿದೆ ಎಂದಾದರೇ ನಮ್ಮ ನಿಯೋಗದ ಜತೆ ಬಂದ ಅವರದೇ ಸಮಾಜದ ನಾಯಕನಿಗೆ ಶಾಸಕರು ಕರೆ ಮಾತಾಡಿರುವುದು ಯಾಕೆ ಎಂದು ಮರುಪ್ರಶ್ನೆ ಮಾಡಿದರು.

ಕಾಪು ಶಾಸಕರು ರಾಜ್ಯ ಸರಕಾರವು ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅವರಿಗೆ ಶಾಸಕರ ನಿಧಿ, ಅಲ್ಪಸಂಖ್ಯಾತರ ನಿಧಿ, ಲೋಕೋಪಯೋಗಿ ಇಲಾಖೆ ಸಹಿತ ಇತರ ಇಲಾಖೆಗಳ ಅನುದಾನ ಹಾಗೂ ತಾ.ಪಂ., ಜಿ. ಪಂ., ನಿಧಿಯೂ ಸಿಕ್ಕಿದೆ. ಆದರೂ ಸರಕಾರದಿಂದ ಅನುದಾನ ಬರುತ್ತಿಲ್ಲ ಎನ್ನುತ್ತಲೇ ಸಮಯ ಕಳೆಯುತ್ತಿರುವ ಶಾಸಕರು ಜನರ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸುವುದು ಸೂಕ್ತ ಎಂದು ಸೊರಕೆ ಮಾತಿನಲ್ಲಿ ಕುಟುಕಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಕಾಂಗ್ರೆಸ್‌ ಮುಖಂಡರುಗಳಾದ ಕಾಪು ದಿವಾಕರ ಶೆಟ್ಟಿ, ನವೀನ್‌ಚಂದ್ರ ಸುವರ್ಣ, ಜಿತೇಂದ್ರ ಪುರ್ಟಾಡೋ, ಶಾಂತಲತಾ ಶೆಟ್ಟಿ, ಮಹಮ್ಮದ್ ನಿಯಾಝ್, ಶರ್ಪುದ್ದೀನ್ ಶೇಖ್ ಉಪಸ್ಥಿತರಿದ್ದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

9 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

10 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

10 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

11 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

11 hours ago