ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ ನಿಧನ :ತೀವ್ರ ಸಂತಾಪ : vishwanews24
ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ (74) ಅವರು ಜೂ.21 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಸಹೋದರರು, ಸಹೋದರಿಯನ್ನು ಮತ್ತು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಮನೆಗೆ ವಾಪಸ್ಸಾಗಿದ್ದ ಅವರು ವಿಶ್ರಾಂತಿಯಲ್ಲಿದ್ದರು. ಶುಕ್ರವಾರ ಬೆಳಗ್ಗಿನ ಜಾವ ತೀವ್ರ ಅಸ್ವಸ್ಥತಗೊಂಡು ನಿಧನ ಹೊಂದಿದ್ದಾರೆ.
ಸಾಮಾಜಿಕ, ಧಾರ್ಮಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ಮುಂದಾಳುತ್ವ ವಹಿಸಿಕೊಂಡು ಸೇವೆ ಸಲ್ಲಿಸುತ್ತಿದ್ದ ಅವರು ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯ ನಿರ್ವಹಿಸಿದ್ದರು. ಕಾಪು ಸಿಎ ಬ್ಯಾಂಕ್ ಮಹಾಪ್ರಬಂಧಕರಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದು ಬಳಿಕ ವಿಕಾಸ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯನ್ನು ಪ್ರಾರಂಭಿಸಿ, ಅದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ವಿಶ್ವಕರ್ಮ ಸಮಾಜದ ಮುಂಚೂಣಿಯ ನಾಯಕರಾಗಿದ್ದ ಅವರು ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿಯಲ್ಲಿ ವಿಶ್ವಕರ್ಮ ಸಮಾಜವನ್ನು ಪ್ರತಿನಿಧಿಸುತ್ತಿದ್ದರು. ಕಾಪು ಪರಿಸರದ ದೇವಸ್ಥಾನ, ದೈವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಕಾರ್ಯದಲ್ಲೂ ಪೂರ್ಣ ಸಹಕಾರ ನೀಡುತ್ತಾ ಬಂದಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…