ಕಾಪು : ಮಲ್ಲಿಗೆ ಪ್ರಿಯೆ ಮಹಾದೇವಿ ಎಂದೇ ಪ್ರಸಿದ್ದಿಯಾದ ಕಾಪು ಶ್ರೀ ಹಳೇ ಮಾರಿಯಮ ದೇವಿಯ ಸನ್ನಿಧಾನದಲ್ಲಿ ಪವಿತ್ರ ಅಧಿಕ ಜೇಷ್ಠ ಮಾಸ ಪ್ರಯುಕ್ತ ಮೇ 26ರಂದು ಲೋಕ ಕಲ್ಯಾಣಾರ್ಥ ವಿಶೇಷ ಲಕ್ಷ ಪುಷ್ಪಾರ್ಚನೆ ಸಮರ್ಪಣೆ ನಡೆಯಿತು.
ಪ್ರಧಾನ ಅರ್ಚಕ ವೇ। ಮೂ ಕಮಲಾಕ್ಷ ಭಟ್ ಮತ್ತು ಅರ್ಚಕ ವೇ ಮೂ। ಶ್ರೀನಿವಾಸ ಭಟ್ ನೇತೃತ್ವದಲ್ಲಿ ಭಕ್ತರಿಂದ ಸಮರ್ಪಣೆಗೊಂಡ ಕೆಂಪು ಕೇಪುಳ ಹೂ ಮತ್ತು ಮಲ್ಲಿಗೆ ಹೂವಿನ ಅರ್ಚನೆ ನಡೆಸಿ, ಬಳಿಕ 1 ಸಾವಿರಕ್ಕೂ ಅಧಿಕ ಚೆಂಡು ಮಲ್ಲಿಗೆಯನ್ನು ಅಲಂಕಾರಕ್ಕೆ ಸಮರ್ಪಿಸಲಾಯಿತು.
ಇದನ್ನೂ ಓದಿ:
ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಮಧ್ಯಾಹ್ನ 2 ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು. 400ಕ್ಕೂ ಅಧಿಕ ಮಂದಿ ಲಕ್ಷ ಪುಷ್ಪಾರ್ಚನೆ ಸೇವೆಯನ್ನು ಸಮರ್ಪಿಸಿದರು.
ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತಸರ ಪ್ರಸಾದ್ ಜಿ. ಶೆಣೈ, ಮೊತ್ತೇಸರರಾದ ರಾಜೇಶ್ ಶೆಣೈ, ರಾಮ್ ನಾಯಕ್, ಸದಾಶಿವ ಕಾಮತ್, ಶ್ರೀಕಾಂತ್ ಭಟ್, ಕಮಿಟಿ ಸದಸ್ಯರಾದ ಚಂದ್ರಕಾಂತ್ ಕಾಮತ್, ಕೃಷ್ಣಾನಂದ ನಾಯಕ್, ಮೋಹನದಾಸ್ ಕಿಣಿ, ರಾಜೇಶ್ ಶೆಣೈ ಮಜೂರು, ಮಾಜಿ ಆಡಳಿತ ಮೊತ್ತೇಸರ ಶ್ರೀಧರ ಶೆಣೈ, ಮಾಜಿ ಮೊತ್ತೇಸರ ರಮೇಶ್ ಪೈ, ಕಾಪು ಪೇಟೆಯ ಹತ್ತು ಸಮಸ್ತರು ಹಾಗೂ ಭಕ್ತರು ಪಾಲ್ಗೊಂಡಿರು.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…