ಕಾಪು : ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಈ ಹಿಂದೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮೊಗವೀರ ಸಮುದಾಯದವರಿಗೆ ಅವಕಾಶ ನೀಡಲಾಗಿರುತ್ತದೆ. ಅದರಂತೆ, ಈ ಬಾರಿಯೂ ಪ್ರಸಕ್ತ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯದ ಶ್ರೀಧರ್ ಕಾಂಚನ್ ರವರನ್ನು ಸದಸ್ಯರಾಗಿ ನೇಮಕ ಮಾಡಲಾಗಿತ್ತು. ಆದರೆ, ಅವರು ತೀರಾ ಅಸೌಖ್ಯದಿಂದಾಗಿ ಇತ್ತೀಚೆಗೆ ನಿಧನರಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮೊಗವೀರ ಸಮುದಾಯದವರನ್ನೇ ನೇಮಕ ಮಾಡುವುದು ನ್ಯಾಯ ಸಮ್ಮತ ವಿಚಾರವಾಗಿರುತ್ತದೆ.
ಆದರೆ, ಕೆಲವೊಂದು ಕಾಣದ ಕೈಗಳು ತಮ್ಮ ಒಣ ಪ್ರತಿಷ್ಠೆಗೋಸ್ಕರ ಅಧಿಕಾರಿ ವರ್ಗವನ್ನು ದುರುಪಯೋಗಪಡಿಸಿಕೊಂಡು, ಸಾರ್ವಜನಿಕರಿಗೆ ಯಾವುದೇ ಮಾಹಿತಿ ಅಥವಾ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವವನ್ನು ಭರ್ತಿ ಮಾಡುವ ಬಗ್ಗೆ ಸಾರ್ವಜನಿಕರ ಅವಗಾಹನೆಗೆ ತರದೇ ತರಾತುರಿಯಲ್ಲಿ, ಪ್ರಬಲ ಮೊಗವೀರ ಸಮುದಾಯವನ್ನು ಕಡೆಗಣಿಸಿ ಬೇರೊಬ್ಬರನ್ನು ನೇಮಕ ಮಾಡಿರುವುದು ನ್ಯಾಯ ಸಮ್ಮತವಲ್ಲ ಎಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ.) ಯ ಅಧ್ಯಕ್ಷರಾದ ವೈ. ಸುಕುಮಾರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಗೆ ಸೇರಲ್ಪಟ್ಟಿರುವ, ಸರ್ಕಾರದ ಆಸ್ತಿಯಾಗಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಸಮಾಜದ ಎಲ್ಲಾ ವರ್ಗದ ಮತ್ತು ಜಾತಿಯ ಭಕ್ತಾದಿಗಳು ಶ್ರದ್ದೆ, ಭಕ್ತಿಯಿಂದ ಆರಾಧಿಸಿಕೊಂಡು ಬಂದಿರುವ ಧಾರ್ಮಿಕ ಕೇಂದ್ರವಾಗಿದೆ.
ಇಲ್ಲಿ ಅಧಿಕಾರ ಮುಖ್ಯವಲ್ಲ, ಬರುವ ಭಕ್ತಾದಿಗಳ ಶ್ರೇಯಸ್ಸು ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರದ ಸಂದರ್ಭದಲ್ಲಿ, ಈ ಭಾಗದಲ್ಲಿ ಇತರೆ ದೊಡ್ಡ ಸಮುದಾಯಗಳಂತೆ, ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಮೊಗವೀರ ಸಮುದಾಯದವರು ತಮ್ಮನ್ನು ಮಾತೆ ಮಾರಿಯಮ್ಮನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರ ಜೊತೆ ಜೊತೆಗೆ, ಅಪಾರ ಪ್ರಮಾಣದಲ್ಲಿ ದೇಣಿಗೆಯನ್ನು ಕೂಡಾ ನೀಡಿರುವುದು ಸತ್ಯ ವಿಚಾರವಾಗಿರುತ್ತದೆ.
ಆದ್ದರಿಂದ, ಅಧಿಕಾರಕ್ಕೋಸ್ಕರ ಒಂದು ದೊಡ್ಡ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿ, ಸಾರ್ವಜನಿಕ ರಲ್ಲಿ ಚರ್ಚೆ ನಡೆಯುತ್ತಿರುವುದು ಅತ್ಯಂತ ವಿಷಾದಣೀಯ ಸಂಗತಿಯಾಗಿರುತ್ತದೆ.
ಆದ್ದರಿಂದ, ನ್ಯಾಯಯುತವಾಗಿ ಮೊಗವೀರ ಸಮುದಾಯದ ವ್ಯಕ್ತಿಯನ್ನು ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೇಮಕ ಮಾಡುವಂತೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯು ಆಗ್ರಹಿಸುವುದರೊಂದಿಗೆ, ಸಂಪೂರ್ಣ ಬೆಂಬಲ ನೀಡಲು ಸಿದ್ಧರಿದ್ದೇವೆ ಎಂದು ವೈ. ಸುಕುಮಾರ್ ರವರು ತಿಳಿಸಿರುತ್ತಾರೆ.
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…
ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…
ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…