Featured

ಕಾಪು ಶ್ರೀ ಹೊಸ ಮಾರಿಗುಡಿ : ಅದಾನಿ ಫೌಡೇಷನ್‌ ವತಿಯಿಂದ 50 ಲಕ್ಷ  ರೂ. ದೇಣಿಗೆ – vishwanews24

ಕಾಪು ಶ್ರೀ ಹೊಸ ಮಾರಿಗುಡಿ : ಅದಾನಿ ಫೌಡೇಷನ್‌ ವತಿಯಿಂದ 50 ಲಕ್ಷ  ರೂ. ದೇಣಿಗೆ

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್‌ಪಿ ಅರುಣ್‌ ಕುಮಾರ್‌, ಜಿ. ಪಂ. ಸಿಇಒ ಪ್ರತೀಕ್‌ ಬಾಯಲ್‌ ಭೇಟಿ

ಕಾಪು: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್‌ಪಿ ಅರುಣ್‌ ಕುಮಾರ್‌, ಜಿ. ಪಂ. ಸಿಇಒ ಪ್ರತೀಕ್‌ ಬಾಯಲ್‌ ಬುಧವಾರ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ರವಿಸುಂದರ್‌ ಶೆಟ್ಟಿ ಸರ್ವ ವಿವರಣೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಮಾತನಾಡಿ, 2019ರಲ್ಲಿ ಜೀರ್ಣೋದ್ಧಾರ ಕಾಮಗಾರಿಗೆ ವೇಗ ದೊರಕುವಾಗ ಅಪರ ಜಿಲ್ಲಾಧಿಕಾರಿಯಾಗಿದ್ದು, ಈಗ ಬ್ರಹ್ಮಕಲಶೋತ್ಸವ ಸಂದರ್ಭ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಭಾಗ್ಯ ದೊರಕಿದೆ. ಭಕ್ತರೆಲ್ಲರ ದೇಣಿಗೆಯೊಂದಿಗೆ ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯಗಳು ಅದ್ಭುತವಾಗಿ ಮೂಡಿ ಬಂದಿದೆ. ಭಕ್ತರ ಅನುಕೂಲಕ್ಕಾಗಿ ವಿವಿಧ ವ್ಯವಸ್ಥೆಗಳನ್ನು ಜೋಡಿಸಲಾಗಿದ್ದು ಎಲ್ಲವೂ ಸುಸೂತ್ರವಾಗಿದೆ ಎಂದರು.

ಅದಾನಿ ಸಂಸ್ಥೆಯಿಂದ ದೇಣಿಗೆ
ಐತಿಹಾಸಿಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪೂರಕವಾಗಿ ಅದಾನಿ ಫೌಡೇಷನ್‌ ವತಿಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು ಮಂಜೂರಾತಿ ಪತ್ರವನ್ನು ಅದಾನಿ ಸಮೂಹದ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ ಅವರು ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರ ಮೂಲಕವಾಗಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ಉಪಾಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಅವರು ಅದಾನಿ ಸಂಸ್ಥೆಯ ಸಿಎಸ್‌ಆರ್‌ ನಿಧಿಯಿಂದಲೇ 3.50 ಕೋ. ರೂ. ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಆಗ್ರಹಿಸಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್‌ ಶೆಟ್ಟಿ, ಗೌರವಾಧ್ಯಕ್ಷರಾದ ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಪ್ರಮುಖರಾದ ರಮೇಶ್‌ ಹೆಗ್ಡೆ ಕಲ್ಯ, ಉದಯ್‌ ಸುಂದರ್‌ ಶೆಟ್ಟಿ, ಭಗವಾನ್‌ದಾಸ್‌ ಶೆಟ್ಟಿಗಾರ್‌, ಯೋಗೀಶ್‌ ವಿ. ಶೆಟ್ಟಿ, ಬೀನಾ ವಿ. ಶೆಟ್ಟಿ, ಸೂರ್ಯಕಾಂತ್‌ ಜಯ ಸುವರ್ಣ, ಸದಾಶಿವ ಕರ್ಕೇರ, ಹರೀಶ್‌ ಶೆಟ್ಟಿ ಎರ್ಮಾಳು, ದೇವಸ್ಥಾನದ ಟ್ರಸ್ಟಿಗಳು, ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

40 minutes ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

44 minutes ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago