ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್ಪಿ ಅರುಣ್ ಕುಮಾರ್, ಜಿ. ಪಂ. ಸಿಇಒ ಪ್ರತೀಕ್ ಬಾಯಲ್ ಭೇಟಿ
ಕಾಪು: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಎಸ್ಪಿ ಅರುಣ್ ಕುಮಾರ್, ಜಿ. ಪಂ. ಸಿಇಒ ಪ್ರತೀಕ್ ಬಾಯಲ್ ಬುಧವಾರ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ರವಿಸುಂದರ್ ಶೆಟ್ಟಿ ಸರ್ವ ವಿವರಣೆಗಳನ್ನು ನೀಡಿದರು.
ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಮಾತನಾಡಿ, 2019ರಲ್ಲಿ ಜೀರ್ಣೋದ್ಧಾರ ಕಾಮಗಾರಿಗೆ ವೇಗ ದೊರಕುವಾಗ ಅಪರ ಜಿಲ್ಲಾಧಿಕಾರಿಯಾಗಿದ್ದು, ಈಗ ಬ್ರಹ್ಮಕಲಶೋತ್ಸವ ಸಂದರ್ಭ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವ ಭಾಗ್ಯ ದೊರಕಿದೆ. ಭಕ್ತರೆಲ್ಲರ ದೇಣಿಗೆಯೊಂದಿಗೆ ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯಗಳು ಅದ್ಭುತವಾಗಿ ಮೂಡಿ ಬಂದಿದೆ. ಭಕ್ತರ ಅನುಕೂಲಕ್ಕಾಗಿ ವಿವಿಧ ವ್ಯವಸ್ಥೆಗಳನ್ನು ಜೋಡಿಸಲಾಗಿದ್ದು ಎಲ್ಲವೂ ಸುಸೂತ್ರವಾಗಿದೆ ಎಂದರು.
ಅದಾನಿ ಸಂಸ್ಥೆಯಿಂದ ದೇಣಿಗೆ
ಐತಿಹಾಸಿಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪೂರಕವಾಗಿ ಅದಾನಿ ಫೌಡೇಷನ್ ವತಿಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದ್ದು ಮಂಜೂರಾತಿ ಪತ್ರವನ್ನು ಅದಾನಿ ಸಮೂಹದ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ ಅವರು ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರ ಮೂಲಕವಾಗಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ಉಪಾಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಅವರು ಅದಾನಿ ಸಂಸ್ಥೆಯ ಸಿಎಸ್ಆರ್ ನಿಧಿಯಿಂದಲೇ 3.50 ಕೋ. ರೂ. ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಆಗ್ರಹಿಸಿದರು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಗೌರವಾಧ್ಯಕ್ಷರಾದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಪ್ರಮುಖರಾದ ರಮೇಶ್ ಹೆಗ್ಡೆ ಕಲ್ಯ, ಉದಯ್ ಸುಂದರ್ ಶೆಟ್ಟಿ, ಭಗವಾನ್ದಾಸ್ ಶೆಟ್ಟಿಗಾರ್, ಯೋಗೀಶ್ ವಿ. ಶೆಟ್ಟಿ, ಬೀನಾ ವಿ. ಶೆಟ್ಟಿ, ಸೂರ್ಯಕಾಂತ್ ಜಯ ಸುವರ್ಣ, ಸದಾಶಿವ ಕರ್ಕೇರ, ಹರೀಶ್ ಶೆಟ್ಟಿ ಎರ್ಮಾಳು, ದೇವಸ್ಥಾನದ ಟ್ರಸ್ಟಿಗಳು, ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…