Featured

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮೊಳಗಲಿದೆ ಅಯೋಧ್ಯೆ ಮಾದರಿಯ ಬೃಹತ್‌ ಘಂಟೆ ನಾದ – vishwanews24

ಕಾಪು: ಹೊಸ ಮಾರಿಗುಡಿ: 1.5 ಟನ್‌ ತೂಕದ ಬೃಹತ್‌ ಘಂಟೆ

ಬೃಹತ್‌ ಗಂಟೆಯು ಭಾರತದ ಎರಡನೇ ಅತೀ ದೊಡ್ಡ ಮತ್ತು ಕರ್ನಾಟಕದ ಪ್ರಥಮ ದೊಡ್ಡ ಘಂಟೆ

ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಇನ್ನು ಮುಂದೆ ಅಯೋಧ್ಯೆ ಮಾದರಿಯ ಬೃಹತ್‌ ಘಂಟೆಯ ನಾದ ಮೊಳಗಲಿದೆ.

ಕಾಪು ಮಾರಿಯಮ್ಮ ದೇವಿಯ ಭಕ್ತರಾದ ಮುಂಬಯಿಯ ಅಲಯನ್ಸ್‌ ಇನ್‌ಫ್ರಾಸ್ಟ್ರಕ್ಚರ್ ಮತ್ತು ರಿಯಲೇರ್ ಪ್ರೈ. ಲಿ. ನ ಸಿಎಂಡಿ ಅರವಿಂದ್‌ ಶೆಟ್ಟಿ ಮತ್ತು ಪಲ್ಲವಿ ಶೆಟ್ಟಿ ದಂಪತಿ ಸಮರ್ಪಿಸಲಿರುವ ಸುಮಾರು 1,500 ಕೆಜಿ ತೂಕದ ಬೃಹತ್‌ ಗಂಟೆಯು ಭಾರತದ ಎರಡನೇ ಅತೀ ದೊಡ್ಡ ಮತ್ತು ಕರ್ನಾಟಕದ ಪ್ರಥಮ ದೊಡ್ಡ ಘಂಟೆಯಾಗಿ ಗುರುತಿಸಲ್ಪಡಲಿದೆ.

1,500 ಕೆಜಿ ತೂಕ ಮತ್ತು 5 ಫೀಟ್‌ ಎತ್ತರದ ಸಂಪೂರ್ಣ ಕಂಚಿನಿಂದ ನಿರ್ಮಾಣಗೊಂಡಿರುವ ಈ ಘಂಟೆಯು ಆಂಧ್ರಪ್ರದೇಶದ ಬಿ.ಎಸ್‌.ಎಂ. ಫೌಂಡ್ರೀಸ್‌ ಕಾರ್ಖಾನೆಯಲ್ಲಿ ಸಿದ್ಧಗೊಂಡಿದೆ. ಶುಕ್ರವಾರ ಕಾಪುವಿಗೆ ತಲುಪುವ ಬೃಹತ್‌ ಗಂಟೆಯು ಫೆ. 9ರಂದು ಸ್ವರ್ಣ ಗದ್ದುಗೆ, ರಜತ ರಥ ಸಹಿತ ಸ್ವರ್ಣಾಭರಣಗಳ ಪುರಪ್ರವೇಶ ಶೋಭಾಯಾತ್ರೆಯ ಜತೆಗೂಡಿ ಕಾಪು ಮಾರಿಗುಡಿಗೆ ಆಗಮಿಸಲಿದೆ.

ದೇಶದ ಅತಿ ದೊಡ್ಡ ಗಂಟೆ ಅಯೋಧ್ಯೆಯಲ್ಲಿಈವರೆಗಿನ ದಾಖಲೆಯೆಂಬಂತೆ ದೇಶದ ಅತಿ ದೊಡ್ಡದಾದ ಸುಮಾರು 2,200 ಕಿ. ಗ್ರಾಂ ತೂಕದ ಬೃಹತ್‌ ಘಂಟೆ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿದೆ. ಮಾರಿಗುಡಿಗೆ ಸಮರ್ಪಿಸುವ ಘಂಟೆ ದೇಶದ 2ನೇ ಮತ್ತು ರಾಜ್ಯದ ಪ್ರಥಮ ಘಂಟೆಯಾಗಿ ದಾಖಲೆ ಬರೆಯಲಿದೆ.

ವಿಶೇಷತೆಗಳೇನು
ಮಾರಿಗುಡಿಯಲ್ಲಿ ಅಳವಡಿಸಲಾಗುವ ಬೃಹತ್‌ ಘಂಟೆ ಯನ್ನು ಅಷ್ಟಧಾತುವನ್ನು ಬಳಸಿ ನಿರ್ಮಿಸಲಾಗಿದೆ. ಇದು 5 ಅಡಿ ಎತ್ತರ, 4 ಅಡಿ ಅಗಲ ಹೊಂದಿದ್ದು, ಇದರ ಸದ್ದು ಕೆಲವು ಕಿಲೋ ಮೀಟರ್‌ ದೂರದವರೆಗೂ ಕೇಳಲಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ – vishwanews24

ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…

1 minute ago

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : 1.8 ಲಕ್ಷ ರೂ. ಪರಿಹಾರಕ್ಕೆ ಮುಂಬೈನ ಗ್ರಾಹಕ ನ್ಯಾಯಾಲಯ ಆದೇಶ – vishwanews24

ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್​ಕಾರ್ಟ್​ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್‌ಲೈನ್‌ನಲ್ಲಿ ಲಕ್ಷಾಂತರ…

8 minutes ago

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ – vishwanews24

ಕೇಂದ್ರದ ಭರವಸೆಯ ಬಳಿಕ  ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್‌ನ ಸಾಮಾಜಿಕ ಕಾರ್ಯಕರ್ತ…

38 minutes ago

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – vishwanews24

ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…

54 minutes ago

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ – vishwanews24

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…

1 hour ago

ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…

1 hour ago