Featured

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – ಫೆ. 14ರಂದು   ಹರಿದ್ವಾರದಿಂದ ಗಂಗಾಜಲ ಆಗಮನ – vishwanews24

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – ಫೆ. 14ರಂದು   ಹರಿದ್ವಾರದಿಂದ ಗಂಗಾಜಲ ಆಗಮನ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಂಡು ಫೆ. 25ರಿಂದ ಮಾ. 5ರ ವರೆಗೆ ಜರಗಲಿರುವ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಫೆ. 14ರಂದು ಹರಿದ್ವಾರದಿಂದ ಕಾಪುವಿಗೆ ಗಂಗಾಜಲ ಆಗಮನವಾಗಲಿದೆ ಎಂದು ಗಂಗಾಜಲ ಸ್ವಾಗತ ಸಮಿತಿಯ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಹೇಳಿದ್ದಾರೆ.

ಫೆ. 12ರಂದು ಕ್ಷೇತ್ರದ ಪ್ರಧಾನ ತಂತ್ರಿ ವಿ| ಕೆ.ಪಿ. ಕುಮಾರಗುರು ತಂತ್ರಿ ಅವರ ನೇತೃತ್ವದಲ್ಲಿ ಹರಿದ್ವಾರದಲ್ಲಿ ನವಕುಂ ಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ಧಾರ್ಮಿಕ ವಿಧಿಗಳಿಂದ ಪೂಜಿಸಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗುತ್ತದೆ. ಆ ಬಳಿಕ ಸಮಿತಿ ಅಧ್ಯಕ್ಷ ಎಂಆರ್‌ಜಿ ಗ್ರೂಫ್ಸ್ನ ಸಿಎಂಡಿ ಕೆ. ಪ್ರಕಾಶ್‌ ಶೆಟ್ಟಿ ಅವರ ನೇತೃತ್ವದಲ್ಲಿ ಫೆ. 14ರಂದು ಗಂಗಾಜಲವಿರುವ ನವಕುಂ ಭಗಳನ್ನು ಟ್ಯಾಬೋದಲ್ಲಿ ಇರಿಸಿ ವೈಭವದ ಮೆರವಣಿಗೆ ಮೂಲಕ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಾನಕ್ಕೆ ತರಲಾಗುವುದು. ಅಲ್ಲಿ 9 ದಿನ ವಿಶೇಷ ಪೂಜೆ ಸಲ್ಲಿಸಿದ ಅನಂತರ ಅಮ್ಮನ ಸನ್ನಿಧಾನಕ್ಕೆ ತರಲಾಗುವುದು ಎಂದರು.

ಹರಿದ್ವಾರಕ್ಕೆ ತೆರಳಿದ ತಂಡ
ಸಮಿತಿ ಅಧ್ಯಕ್ಷ ಕೆ. ಪ್ರಕಾಶ್‌ ಶೆಟ್ಟಿ ದಂಪತಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ದಂಪತಿ, ಕಾರ್ಯಾ ಧ್ಯಕ್ಷ ಮತ್ತು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಸಮಿತಿ ಕಾರ್ಯಾಧ್ಯಕ್ಷ ಉದಯ ಸುಂದರ್‌ ಶೆಟ್ಟಿ ದಂಪತಿ, ಪ್ರಧಾನ ತಂತ್ರಿ ವಿ| ಕೆ. ಪಿ. ಕುಮಾರಗುರು ತಂತ್ರಿ ದಂಪತಿ ಗಂಗಾ ಜಲ ತರಲು ಹರಿದ್ವಾರಕ್ಕೆ ತೆರಳಿದೆ ಎಂದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್‌ ಶೆಟ್ಟಿ ಬಾಲಾಜಿ, ಪ್ರ. ಕಾರ್ಯದರ್ಶಿ ಸುಹಾಸ್‌ ಹೆಗ್ಡೆ ನಂದಳಿಕೆ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್‌. ಪಾಲನ್‌, ಪ್ರಧಾನ ಕಾರ್ಯದರ್ಶಿ ರಮೇಶ್‌ ಹೆಗ್ಡೆ, ಸಿಇಒ ಕೆ. ರವಿಕಿರಣ್‌ ಮತ್ತಿತರರು ಭಾಗವಹಿಸಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

5 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago