ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯುವ ಮಹಾಅನ್ನಸಂತರ್ಪಣೆಗೆ ಪೂರ್ವಭಾವಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸಹಿತವಾಗಿ ವಿವಿಧೆಡೆಗಳಿಂದ ಬೃಹತ್ ಹಸುರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಲಿದೆ.
ಫೆ. 22ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಸಮರ್ಪಿಸಲ್ಪಡುವ ದಕ್ಷಿಣ ವಾಹಿನಿ ಹೊರೆಕಾಣಿಕೆ ಸಮರ್ಪಣೆಯು ರಾ. ಹೆ. 66ರ ಮೂಳೂರು – ಕೊಪ್ಪಲಂಗಡಿ ಬಳಿಯಿಂದ ಹಾಗೂ ಫೆ. 23ರಂದು ಉಡುಪಿ ಜಿಲ್ಲೆಯಿಂದ ಸಮರ್ಪಿಸಲ್ಪಡುವ ಉತ್ತರ ವಾಹಿನಿ ಹೊರೆಕಾಣಿಕೆಯು ರಾ. ಹೆ. 66ರ ಪಾಂಗಾಳ ಸೇತುವೆ ಬಳಿಯಿಂದ ಹೊರಟು ಮಾರಿಗುಡಿಯನ್ನು ತಲುಪಲಿದೆ. ಈ ಸಂದರ್ಭ ವಿವಿಧ ಬಿರುದಾವಳಿಗಳೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ ಎಂದು ಹೊರೆಕಾಣಿಕೆ ಸಮರ್ಪಣೆ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳು ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಹೊರೆ ಕಾಣಿಕೆ ಸಂಗ್ರಹ ಮತ್ತು ಸಮರ್ಪಣೆಗಾಗಿ ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯ ಸಂಸದರು, ಶಾಸಕರು ಸಹಿತ ಎಲ್ಲ ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಸಹಕಾರಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೃಹತ್ ಹೊರೆಕಾಣಿಕೆ ಸಮರ್ಪಣೆಗೊಳ್ಳಲಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…