Featured

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನ – ಎ. 9ರಂದು ಮಾರಿಯಮ್ಮ ದೇವಿಯ ನೂತನ ದೇಗುಲ ಸಮರ್ಪಣೆ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ – Vishwanews24

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಎ. 9ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

ಕಾಪು: ಭರದಿಂದ ಸಾಗುತ್ತಿರುವ ಕಾಪು ಮಾರಿಯಮ್ಮ ದೇವಿಯ ನೂತನ ದೇಗುಲ ಸಮರ್ಪಣೆ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎ. 9ರಂದು ಬೆಳಿಗ್ಗೆ 8.30ಕ್ಕೆ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಚಂಗಿ ದೇವಿಯ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ಹೊಸ ಮಾರಿಗುಡಿಯ ಪ್ರಧಾನ ತಂತ್ರಿ ವಿ| ಕೆ.ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ಪ್ರಾಚೀನ ಶೈಲಿಯ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿ ಪೂರ್ವಭಾವಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಅಂದಿನಿಂದ ಮುಂದಿನ 9 ತಿಂಗಳು ಪ್ರತೀ ತಿಂಗಳಿಗೊಂದರಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ, 2025ರ ಜ. 14ರ ಬಳಿಕ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ ಎಂದರು.

ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿ
ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಅಮ್ಮನ ಭವ್ಯ ಗರ್ಭಗುಡಿಯ ದಿವ್ಯ ಸಾನ್ನಿಧ್ಯದಲ್ಲಿ ಕೋಣಗಳಿಂದ ಉಳುಮೆ ಮಾಡುವ ಮೂಲಕ ನವಧಾನ್ಯಗಳ ಬಿತ್ತನೆ ಮಾಡುವುದು. ಮುಂದಿನ 18 ದಿನಗಳಲ್ಲಿ ಧಾನ್ಯಗಳು ಮೊಳಕೆಯೊಡೆದಾಗ ಗೋ ನಿವಾಸಕ್ಕಾಗಿ ಗರ್ಭಗುಡಿಯಲ್ಲಿ 9 ಅಥವಾ 18 ಗೋವುಗಳನ್ನು ಪೂಜಿಸಿ, ಧಾನ್ಯ ಮೇಯಲು ಬಿಡಲಾಗುತ್ತದೆ. ಗೋವುಗಳು ಸಾನ್ನಿಧ್ಯದಲ್ಲಿ 9 ದಿನ ಗೋವಾಸವಿದ್ದು 9ನೇ ದಿನ ಗೋವುಗಳಿಂದ ಹಾಲನ್ನು ಕರೆದು ಪಂಚಗವ್ಯ ತಯಾರಿಸಿ ಅವುಗಳಿಂದ ದೇವಸ್ಥಾನದ ಆವರಣವನ್ನು ಸಂಪ್ರೋಕ್ಷಣೆ ಮಾಡಿ ಶುದ್ಧಿಗೊಳಿಸಲಾಗುತ್ತದೆ. ಈ ವಿಧಾನಗಳು ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಐತಿಹಾಸಿಕ ಕಾರ್ಯಕ್ರಮವಾಗಿ ಸಾಕ್ಷಿ ಬರೆಯಲಿದೆ ಎಂದರು.

ಬೆಳಗ್ಗೆ 11ಕ್ಕೆ ನೂತನವಾಗಿ ನಿರ್ಮಾಣಗೊಳ್ಳಲಿರುವ ರಾಜಗೋಪುರ, ಭೋಜನ ಶಾಲೆ, ಆಡಳಿತ ಕಚೇರಿ ಹಾಗೂ ಸುಸಜ್ಜಿತ ಶೌಚಾಲಯ ನಿರ್ಮಾಣ ಯೋಜನೆಗೆ ಭೂಮಿ ಪೂಜೆ, ಶಂಕು ಸ್ಥಾಪನೆ ಸಹಿತ ಶಿಲಾನ್ಯಾಸ ನೆರವೇರಿಸಲಾಗುವುದು. ಆ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನಾಂಕ ಘೋಷಣೆ, ಅಮ್ಮನ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿಯನ್ನು ಉದ್ಘಾಟಿಸಲಾಗುವುದು. ಚರಿತ್ರೆಗೆ ಸೇರಲಿರುವ ಭವ್ಯ ಸಮಾರಂಭದಲ್ಲಿ ವಿವಿಧ ಗಣ್ಯರು, ದಾನಿಗಳು, ಅಮ್ಮನ ಭಕ್ತ ವೃಂದ, ಸಮಿತಿಯ ಸದಸ್ಯರು ಹಾಗೂ ಊರ ಪರವೂರ ಮಹನಿಯರು ಭಾಗವಹಿಸಲಿದ್ದಾರೆ. ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದರು.

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್‌. ಪಾಲನ್‌, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್‌ ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago