ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ನವಚಂಡೀಯಾಗವು ಫೆಬ್ರವರಿ 4 ರಂದು ನಡೆಯಲಿದೆ, ಆ ಪ್ರಯುಕ್ತ ಇಂದು ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ಮುಖಂಡತ್ವದಲ್ಲಿ ಕುಂಕುಮ ಪ್ರಸಾದ ಮುಹೂರ್ತ ನೆರವೇರಿತು.
ನವದುರ್ಗಾ ಲೇಖನವನ್ನು ಬರೆದು ಅರ್ಪಿಸಿ, ನವಚಂಡೀಯಾಗದ ದಿನದಂದು ಸಂಕಲ್ಪದಲ್ಲಿ ಭಾಗಿಯಾಗಲಿರುವ ಭಕ್ತರಿಗೆ ನೀಡುವ ಕುಂಕುಮವನ್ನು ಮಾರಿಯಮ್ಮನಿಗೆ ಅರ್ಪಿಸಿ ಬ್ರಾಹ್ಮಣ ಸಂಘದ ಮಹಿಳೆಯರು ನಿರಂತರ ಲಕ್ಷ್ಮಿ ಶೋಭಾನೆಯೊಂದಿಗೆ ಕುಂಕುಮ ಪ್ರಸಾದವನ್ನು ಪ್ಯಾಕೆಟ್ ಗಳಿಗೆ ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಕೋಶಾಧಿಕಾರಿ ಕೆ. ವಿಶ್ವನಾಥ್, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್ ಪಾಲನ್, ಶೇಖರ ಸಾಲ್ಯಾನ್, ಮನೋಹರ ರಾವ್, ಬ್ರಹ್ಮಕಲಶೋತ್ಸವ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷರಾದ ಬೀನಾ ವಾಸುದೇವ ಶೆಟ್ಟಿ, ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿಯ ಮುಖ್ಯ ಸಂಚಾಲಕರಾದ ಸಾವಿತ್ರಿ ಗಣೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…