Featured

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭ  – vishwanews24

ಕಾಪು ಶ್ರೀ ಹೊಸ ಮಾರಿಗುಡಿ :  ಫೆ. 25ರಿಂದ ಮಾ.5ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ

ಮಹಾವೈಭವಕ್ಕೆ ಸಾಕ್ಷಿಯಾಗಲು ಸಜ್ಜಾಗುತ್ತಿದೆ ಕಾಪು ..

ಭರದಿಂದ ಸಾಗುತ್ತಿವೆ ಅಂತಿಮ ಸಿದ್ಧತೆಗಳು..

ಕಾಪು: ಸಂಪೂರ್ಣ ಇಳಕಲ್‌ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭಗೊಂಡಿದೆ.

ಫೆ. 25ರಿಂದ ಮಾರ್ಚ್‌ 5ರವರೆಗೆ ನಡೆಯುವ ನವ ದಿನಗಳ ವೈಭವಕ್ಕೆ ಇನ್ನು 4 ದಿನಗಳು ಬಾಕಿ ಉಳಿದಿದ್ದು, ಅಂತಿಮ ಸಿದ್ಧತೆಗಳು ಭರದಿಂದ ಸಾಗುತ್ತಿವೆ.  ಹಿಂದೆಂದೂ ಕಾಣದ ಮಹಾವೈಭವಕ್ಕೆ ಸಾಕ್ಷಿಯಾಗಲು ಕಾಪು ಸಜ್ಜಾಗುತ್ತಿದೆ.

ಚಪ್ಪರ ಅಳವಡಿಕೆ, ದೇವಸ್ಥಾನದ ಸುತ್ತಮುತ್ತ ಮತ್ತು ನಗರ ಸುಂದರೀಕರಣದಂತಹ ಕಾರ್ಯಕ್ರಮಗಳಿಗೆ ವೇಗ ನೀಡಲಾಗಿದೆ. ದೇವಸ್ಥಾನದ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯೊಳಗೆ ಉತ್ತಮ ಪಾರ್ಕಿಂಗ್‌ ವ್ಯವಸ್ಥೆ ,  ಪ್ರತೀ ದಿನ 20ರಿಂದ 30 ಸಾವಿರದಷ್ಟು ಭಕ್ತರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ , ಪ್ರತೀ ದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ವ್ಯವಸ್ಥೆ ,  ಪ್ರತಿ ದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಮಾರಿಗುಡಿ ಬ್ರಹ್ಮಕಲಶೋತ್ಸವ ಸಂದರ್ಭ ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದಲೂ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿಯಿಂದ ಉದ್ಯಾ ವರದವರೆಗೆ ಹೆದ್ದಾರಿ ಅಲಂಕಾರಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.

ಬ್ರಹ್ಮಕಲಶೋತ್ಸವವನ್ನು ಕೇವಲ ಧಾರ್ಮಿಕತೆಗೆ ಸೀಮಿತವಾಗಿರಿಸದೇ ಪ್ರವಾಸೋದ್ಯಮಕ್ಕೂ ಒತ್ತು ನೀಡಿ, ಇಲ್ಲಿಗೆ ಬರುವ ಜನರಿಗೆ ಉತ್ತಮ ಆತಿಥ್ಯ, ಸೌಕರ್ಯ ಒದಗಿಸಲು ಪ್ರಯತ್ನಿಸಲಾಗುವುದು. ಆಗಮಿಸುವ ಭಕ್ತರು, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡುವುದರ ಜತೆಗೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗು ಪೊಲೀಸ್‌ ಬಂದೋಬಸ್ತ್ಗೂ ವ್ಯವಸ್ಥೆ ಮಾಡಿಕೊಡಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago