Featured

ಕಾಪು ಶ್ರೀ ಹೊಸ ಮಾರಿಗುಡಿ : ಮಾರಿಯಮ್ಮನ ಪ್ರತಿಷ್ಠಾಪನೆ ಮಹಾ ಬ್ರಹ್ಮಕಲಶೋತ್ಸವ ಸಂಪನ್ನ – vishwanews24

ಶ್ರೀ ಹೊಸ ಮಾರಿಗುಡಿ  : ಮಾರಿಯಮ್ಮನ ಪ್ರತಿಷ್ಠಾಪನೆ ಮಹಾ ಬ್ರಹ್ಮಕಲಶೋತ್ಸವ ಸಂಪನ್ನ

ಅಮ್ಮನ ಪವಿತ್ರ ಬ್ರಹ್ಮಕಲಶೋತ್ಸವವನ್ನು ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ಉಡುಪಿ: ಶರಣೆಂದು ಬಂದವರಿಗೆ ಕೈ ಹಿಡಿದು ಆಶೀರ್ವದಿಸುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕೊನೆಯ ದಿನವಾದ ಬುಧವಾರದಂದು ಶ್ರೀ ಮಾರಿಯಮ್ಮನ ದೇವರಿಗೆ ಮಹಾಬ್ರಹ್ಮಕಲಶಾಭಿಷೇಕ ನಡೆಸುವ ಮೂಲಕ ಕಾರ್ಯಕ್ರಮ ಸಂಪನ್ನಗೊಂಡಿತು.

ಪವಿತ್ರ ಬ್ರಹ್ಮಕಲಶೋತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೇದಮೂರ್ತಿ ಕೆ.ಜಿ.ರಾಗವೇಂದ್ರ ತಂತ್ರಿ ಅವರ ಮಾರ್ಗದರ್ಶನದಲ್ಲಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿ ಹಾಗೂ ಇತರ ಅರ್ಚಕರ ನೇತೃತ್ವದಲ್ಲಿ ಮಹಾ ಬ್ರಹ್ಮಕಲಶಾಭಿಷೇಕ ನಡೆಯಿತು.

ಬೆಳಿಗ್ಗೆ 8 ಗಂಟೆಗೆ ಮಂಗಳ ಗಣಯಾಗ, ಶಾಂಭವಿ ಕಾಳಮಾತೃಕಾರಾಧನೆ, ಕಾಳರಾತ್ರಿ ಕಾಳಮಾತೃಕಾರಾಧನೆ, ಮಂಡಲಾಚರಣೆಯೊಂದಿಗೆ ಮಹಾ ಬ್ರಹ್ಮಕಲಶಾಭಿಷೇಕದ ಧಾರ್ಮಿಕ ವಿಧಿವಿಧಾನಗಳು ಮಾರಿಯಮ್ಮ ದೇವಿಯ ಬ್ರಹ್ಮಕಲಶಾಭಿಷೇಕದೊಂದಿಗೆ ಮುಕ್ತಾಯಗೊಂಡವು.

ಒಂದು ಚಿನ್ನದ ಕೆತ್ತಿದ ಬೆಳ್ಳಿ ಬ್ರಹ್ಮಕಲಶ, ಒಂಬತ್ತು ಬೆಳ್ಳಿ ಬ್ರಹ್ಮಕಲಶ, ಒಂಬತ್ತು ಬೆಳ್ಳಿ ದ್ರವ್ಯ ಕಲಶ, 88 ಬೆಳ್ಳಿ ಕಲಶ, ಮತ್ತು 901 ತಾಮ್ರ ಕಲಶಗಳು ಸೇರಿದಂತೆ ಒಟ್ಟು 1,008 ಕಲಶಗಳನ್ನು ವಿತರಿಸಲಾಯಿತು. ದೇವಾಲಯವು ಹೂವುಗಳಿಂದ ಸುಂದರವಾಗಿ ಅಲಂಕರಿಸಲ್ಪಟ್ಟಿತ್ತು ಮತ್ತು 50,000 ಕ್ಕೂ ಹೆಚ್ಚು ಭಕ್ತರು ಮಾರಿಯಮ್ಮ ದೇವಿಯ ಆಶೀರ್ವಾದವನ್ನು ಪಡೆದು ಪುಣೀತರಾದರು.

ಈ ಸಂದರ್ಭದಲ್ಲಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಅವರು ಕೆ. ವಾಸುದೇವ್ ಶೆಟ್ಟಿ ಅವರಿಗೆ ‘ರಾಜಋಷಿ’ ಬಿರುದನ್ನು ಪ್ರದಾನ ಮಾಡಿದರು. ನವನೀತ್ ಶೆಟ್ಟಿ ಬರೆದಿರುವ “ಮಾರಿಯಮ್ಮ” ಪುಸ್ತಕವನ್ನು ಕೆ ವಾಸುದೇವ್ ಶೆಟ್ಟಿ ಬಿಡುಗಡೆ ಮಾಡಿದರು. ಮಹಾ ಬ್ರಹ್ಮಕಲಶಾಭಿಷೇಕದ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago