Featured

ಕಾಪು ಶ್ರೀ ಹೊಸ ಮಾರಿಗುಡಿ : ಸೆ.3ರಂದು ಮಂಗಳ ಗೌರಿ ಪೂಜೆ  , ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ ಸ್ವೀಕಾರ ಹಾಗೂ ಧಾರ್ಮಿಕ ಸಭೆ – vishwanews24

ಕಾಪು ಶ್ರೀ ಹೊಸ ಮಾರಿಗುಡಿ : ಸೆ.3ರಂದು ಮಂಗಳ ಗೌರಿ ಪೂಜೆ  , ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ ಸ್ವೀಕಾರ ಹಾಗೂ ಧಾರ್ಮಿಕ ಸಭೆ

ಕಾಪು: ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ಹಂತದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ಮಾರಿಯಮ್ಮನ ಸನ್ನಿಧಿಯಲ್ಲಿ 2025ರ ಮಾರ್ಚ್‌ನಲ್ಲಿ ನಡೆಯುವ ಜೀರ್ಣೋದ್ಧಾರ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಫೆಬ್ರವರಿಯಲ್ಲಿ ನವದುರ್ಗಾ ಲೇಖನ ಯಜ್ಞ ನಡೆಯಲಿದೆ.

ಕಾರ್ಯಕ್ರಮದ ಪೂರ್ವ ಭಾವಿಯಾಗಿ ಸೆ.3ರಂದು ಬೆಳಗ್ಗೆ ಶ್ರೀಕ್ಷೇತ್ರದಲ್ಲಿ ಮಂಗಳ ಗೌರಿ ಪೂಜೆಯೊಂದಿಗೆ ಸಮಿತಿ ಉದ್ಘಾಟನೆ ಮತ್ತು ಲೇಖನ ಸಂಕಲ್ಪ ಸ್ವೀಕಾರ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ತಿಳಿಸಿದರು.

ಜಗತ್ತಿನೆಲ್ಲೆಡೆ ನೆಲೆಸಿರುವ ಮಾರಿಯಮ್ಮ ದೇವಿಯ ಭಕ್ತರನ್ನು ಸೇರಿಸಿಕೊಂಡು ನವದುರ್ಗಾ ಲೇಖನ ಯಜ್ಞ ಹಾಗೂ ನವಚಂಡಿಯಾಗ ನಡೆಸಲಾಗುತ್ತಿದ್ದು, ನವ ದುರ್ಗಾ ಲೇಖನ ಯಜ್ಞದಲ್ಲಿ ಭಾಗವಹಿಸಲು ಬಯಸುವ ಭಕ್ತರು ಸಂಕಲ್ಪ ಸ್ವೀಕರಿಸಲು ಈ ಕಾರ್ಯಕ್ರಮದಂದು ಅವಕಾಶ ಒದಗಿಸಿಕೊಡಲಾಗುತ್ತಿದೆ ಎಂದರು.

ನವದುರ್ಗಾ ಲೇಖನ ಯಜ್ಞದಲ್ಲಿ ಭಾಗವಹಿಸುವ ಭಕ್ತರು ನವದುರ್ಗಾ ಲೇಖನ ಯಜ್ಞದ ಪುಸ್ತಕ ಪಡೆಯಲು 199 ರೂ. ನೀಡಿ, ಹೆಸರು ನೋಂದಾಯಿಸಿದರೆ, ಮಂಗಳಗೌರಿ ಪೂಜೆಯಲ್ಲಿ ಪಾಲ್ಗೊಂಡು, ನವದುರ್ಗಾ ಲೇಖನ ಯಜ್ಞದ ಸಂಕಲ್ಪ ಸ್ವೀಕರಿಸಲು ಅವಕಾಶ ಮಾಡಿಕೊಡಲಾಗುವುದು. ಅ.28 ರ ವರೆಗೆ ನೋಂದಣಿಗೆ ಅವಕಾಶವಿದೆ .

ದೇವಸ್ಥಾನದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ.ಕುಮಾರ ಗುರು ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಉಪಸ್ಥಿತಿಯಲ್ಲಿ ಸೆ.3 ರಂದು ಬೆಳಗ್ಗೆ 8.30ಕ್ಕೆ ಅಮ್ಮನ ಸನ್ನಿಧಾನದಲ್ಲಿ ಪ್ರಾರ್ಥನೆಯೊಂದಿಗೆ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಚಾಲನೆ ನೀಡಲಾಗುವುದು. 9 ಗಂಟೆಗೆ ಮಂಗಳ ಗೌರಿ ಪೂಜೆ ಮತ್ತು ಲೇಖನ ಸಂಕಲ್ಪನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಮಧ್ಯಾಹ್ನ 1 ಗಂಟೆಗೆ ಪ್ರಸಾದ ಭೋಜನ ವಿತರಣೆ ನಡೆಯಲಿದೆ. ಬೆಳಗ್ಗೆ 10.15ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಅವಧೂತ ವಿನಯ್ ಗುರೂಜಿ ಉದ್ಘಾಟಿಸಲಿದ್ದಾರೆ. ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

4 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

5 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

5 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

5 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

9 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

10 hours ago