ಕಾಪು: ದಕ್ಷಿಣ ಭಾರತದಲ್ಲೇ ಅತ್ಯಪೂರ್ವ ಎಂಬಂತೆ ಸಂಪೂರ್ಣ ಇಳಕಲ್ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸಮರ್ಪಣೆಗೊಳ್ಳಲಿರುವ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಭಕ್ತರಿಂದ ಅಮಿತೋತ್ಸಾಹದ ಸ್ಪಂದನೆ ಸಿಗುತ್ತಿದೆ.
ಗದ್ದುಗೆಯೇ ಪ್ರಧಾನವಾಗಿರುವ ಕಾಪು ಮಾರಿಯಮ್ಮನ ಸನ್ನಿಧಿಯಲ್ಲಿ ಸುಮಾರು 20 ಕೆಜಿ ಚಿನ್ನ ಮತ್ತು 180 ಕೆಜಿ ಬೆಳ್ಳಿಯಲ್ಲಿ ಸ್ವರ್ಣ ಗದ್ದುಗೆ ಸಮರ್ಪಣೆಗೊಳ್ಳಲಿದ್ದು, ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಗುಜ್ಜಾಡಿ ಸ್ವರ್ಣ ಜುವೆಲರ್ ಪ್ರೈ. ಲಿಮಿಟೆಡ್ನ ಸ್ವರ್ಣೋದ್ಯಮದಲ್ಲಿ ಗದ್ದುಗೆ ನಿರ್ಮಾಣಗೊಳ್ಳಲಿದೆ.
ಸ್ವರ್ಣ ಸಂಗ್ರಹದಲ್ಲಿ ದಾಖಲೆ
ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿ ನೇತೃತ್ವದಲ್ಲಿ ಭಕ್ತರಿಂದ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಜೂ. 25ರಂದು ಚಾಲನೆ ನೀಡಲಾಗಿತ್ತು. ಅ. 3ರಂದು ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ ನೆರವೇರಿಸಲಾಗಿದೆ.
ಸಮಿತಿಯ ನಿರೀಕ್ಷೆಯನ್ನೂ ಮೀರಿ ಭಕ್ತರಿಂದ ಸುಮಾರು 11 ಕೆಜಿ ಚಿನ್ನ, 36 ಕೆಜಿ ಬೆಳ್ಳಿ ಸಮರ್ಪಣೆಯಾಗಿದ್ದು ಇನ್ನೂ ಸ್ವರ್ಣ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.
ಚಿನ್ನ, ಬೆಳ್ಳಿ ಹಸ್ತಾಂತರ
ಗುಜ್ಜಾಡಿ ಸ್ವರ್ಣ ಜುವೆಲರ್ ನಲ್ಲಿ ಸ್ವರ್ಣ ಗದ್ದುಗೆಯ ಕೆಲಸ ಆರಂಭಗೊಂಡಿದ್ದು, ಅ.24ರಂದು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ನೇತೃತ್ವದಲ್ಲಿ ಸ್ವರ್ಣ ಜುವೆಲರ್ಸ್ನ ಪ್ರಬಂಧಕ ಲಕ್ಷಿ$¾à ನಾರಾಯಣ ಮತ್ತು ಸುನಿಲ್ ಜಿ. ಅವರಿಗೆ ಚಿನ್ನ ಮತ್ತು ಬೆಳ್ಳಿಯನ್ನು ಹಸ್ತಾಂತರಿಸಲಾಯಿತು.
ಪ್ರಮುಖರಾದ ರಮೇಶ್ ಹೆಗ್ಡೆ ಕಲ್ಯಾ, ಕಾಪು ದಿವಾಕರ ಶೆಟ್ಟಿ, ರತ್ನಾಕರ ಶೆಟ್ಟಿ ನಡಿಕೆರೆ, ಮಾಧವ ಆರ್. ಪಾಲನ್, ಚಂದ್ರಶೇಖರ್ ಅಮೀನ್, ಜಯರಾಮ್ ಆಚಾರ್ಯ, ರಾಧಾರಮಣ ಶಾಸ್ತ್ರಿ, ದಾಮೋದರ ಶರ್ಮಾ, ಗೋವರ್ಧನ್ ಸೇರಿಗಾರ್ ಮುಂತಾದವರು ಉಪಸ್ಥಿತರಿದ್ದರು.
ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿಯ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆ ಸಂಕಲ್ಪಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ ದೊರಕಿದೆ. ಸಮಿತಿಯ ನಿರೀಕ್ಷೆ ಮತ್ತು ಆಶಯಕ್ಕೆ ಪೂರಕವಾಗಿ ಪ್ರಪಂಚದಾದ್ಯಂತ ನೆಲೆಸಿರುವ ಕಾಪುವಿನ ಅಮ್ಮನ ಮಕ್ಕಳು ಪ್ರತಿದಿನ ದೇವಿಯ ಸನ್ನಿಧಾನಕ್ಕೆ ಬಂದು ಚಿನ್ನ ಮತ್ತು ಬೆಳ್ಳಿ ನೀಡುತ್ತಿದ್ದಾರೆ. ಈವರೆಗೆ ಸಂಗ್ರಹವಾಗಿರುವ ಚಿನ್ನ, ಬೆಳ್ಳಿ ಹೊಸ ದಾಖಲೆ ಬರೆದಿದ್ದು, ಇದೆಲ್ಲವೂ ಅಮ್ಮನ ಪವಾಡವೇ ಆಗಿದೆ. ಭಕ್ತರು ಇನ್ನೂ ಸ್ವರ್ಣ ಮತ್ತು ಬೆಳ್ಳಿ ಸಮರ್ಪಿಸಬಹುದು ಎಂದು ಸ್ವರ್ಣ ಗದ್ದುಗೆ ಸಮರ್ಪಣೆ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ ಮುಂಬಯಿ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…