ಪ್ರಧಾನಿ ನರೇಂದ್ರ ಮೋದೀಜಿಯವರ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಸಪ್ಟೆಂಬರ್ ೨ರಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಪಕ್ಷದ ಪ್ರಮುಖರು, ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಕಾರ್ಯಕರ್ತರು, ಹಿತೈಶಿಗಳು 8800002024 ಕ್ಕೆ ಮಿಸ್ಡ್ ಕಾಲ್ ನೀಡಿ ಬಿಜೆಪಿ ಸದಸ್ಯತ್ವ ಪಡೆಯಲು ಜಿಲ್ಲಾ ಸಂಚಾಲಕರಾದ ಮಟ್ಟಾರು ರತ್ನಾಕರ್ ಹೆಗ್ಡೆಯವರು ತಿಳಿಸಿದರು.
ಕಾಪು ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ನಡೆದ ಈ ಒಂದು ಕಾರ್ಯಗಾರದ ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರು ವಹಿಸಿದರು.
ಸಪ್ಟೆಂಬರ್ ೨ರಿಂದ ೨೫ರವರೆಗೆ, ಅಕ್ಟೋಬರ್ ೧ರಿಂದ ಅಕ್ಟೋಬರ್ ೧೫ ಎರಡು ಹಂತಗಳಲ್ಲಿ ಅಭಿಯಾನ ನಡೆಯಲಿದೆ. ಮಿಸ್ಡ್ ಕಾಲ್
ಕ್ಯೂಆರ್ ಕೋಡ್ ಸ್ಕಾನ್ ಮೂಲಕ ನಮೋ ಆಪ್ ಮೂಲಕ ನೋಂದಾವಣಿ ಮಾಡಬಹುದು. ಅಕ್ಟೋಬರ್ ೧೫ರಿಂದ ೩೦ರವರೆಗೆ ಮನೆ-ಮನೆ ಭೇಟಿ ಮೂಲಕ ಸದಸ್ಯತ್ವ ಅಭಿಯಾನ ನಡೆಯಲಿದೆ. ಪ್ರತೀ ಬೂತ್ ಮಟ್ಟದಲ್ಲಿ ಕನಿಷ್ಟ ೩೦೦ ಸದಸ್ಯರನ್ನು ನೋಂದಾಯಿಸಬೇಕೆ0ದು ತಿಳಿಸಿದರು.
ಈ ಸಂಧರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಹಿಳಾ
ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಗಿರೀಶ್ ಅಂಚನ್, ನಿಕಟಪೂರ್ವ ಜಿಲ್ಲಾ ಪ್ರಧಾನಕಾರ್ಯದರ್ಶಿಯಾದ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷರಾದ ನಯನಾ ಗಣೇಶ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ರೈತ ಮೋರ್ಚಾ ಅಧ್ಯಕ್ಷರಾದ ಕೃಷ್ಣ ರಾವ್, ಹಿಂದುಳಿದ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಪುರಸಭಾ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ ಮತ್ತು ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರನಿಧಿಗಳು ಉಪಸ್ಥಿತರಿದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…