Featured

ಕಾಪು : ಸಮಾಜ ರತ್ನ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಪತ್ನಿ ವಸುಂಧರಾ ಶೆಟ್ಟಿ ಪಂಚಭೂತದಲ್ಲಿ ಲೀನ – vishwanews24

ಸಮಾಜ ರತ್ನ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಪತ್ನಿ ವಸುಂಧರಾ ಶೆಟ್ಟಿ ಪಂಚಭೂತದಲ್ಲಿ ಲೀನ..

ಬೃಹತ್‌ ಮೆರವಣಿಗೆಯಲ್ಲಿ ಅಂತಿಮ ವಿದಾಯ..

ಸ್ವಯಂ ಪ್ರೇರಿತವಾಗಿ ಕಾಪು ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟು ಬಂದ್‌ ..

ಕಾಪು : ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾದ ಕಾಪುವಿನ ಪ್ರಖ್ಯಾತ ನಾಟಕ ಸಂಸ್ಥೆ “ರಂಗತರಂಗ” ದ  ಸ್ಥಾಪಕ, ಖ್ಯಾತ ನಟ, ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಬುಧವಾರ ಸಂಜೆ ಕುಟುಂಬಿಕರ, ಗಣ್ಯರ, ಸಾವಿರಾರು ಅಭಿಮಾನಿಗಳ ಅಶ್ರು ತರ್ಪಣದೊಂದಿಗೆ ತಮ್ಮ ಮನೆ ಹಿಂಬದಿಯ ಗದ್ದೆಯಲ್ಲಿ ಪಂಚ ಭೂತಗಳಲ್ಲಿ ಲೀನವಾದರು.

ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ಕಾಪು ರಾಹೆ ೬೬ರ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನಿಂದ ಬೃಹತ್‌ ಮೆರವಣಿಗೆಯಲ್ಲಿ ಕರಂದಾಡಿ ಶ್ರೀ ರಾಮ ಪ್ರಾಥಮಿಕ ಶಾಲಾ ಮೈದಾನದವರೆಗೆ ಮೃತದೇಹಗಳನ್ನು ಕೊಂಡೊಯ್ಯಲಾಯಿತು.

ಶ್ರೀ ರಾಮ ಪ್ರಾಥಮಿಕ ಶಾಲಾ ಮೈದಾನದಲ್ಲಿ ದಿವಂಗತ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ದಿವಂಗತ ವಸುಂಧರಾ ಶೆಟ್ಟಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು.ಲೀಲಾಧರ ಶೆಟ್ಟಿಯವರ ಸಾವಿರಾರು ಅಭಿಮಾನಿಗಳು ಅಶ್ರುತರ್ಪಣದೊಂದಿಗೆ ಅಂತಿಮ ನಮನ ಸಲ್ಲಿಸಿದರು.

ಲೀಲಾಧರ ಶೆಟ್ಟಿಯವರ ಮನೆ ಹಿಂಬದಿಯ ಗದ್ದೆಯಲ್ಲಿ ದಂಪತಿಗಳ ಮೃತ ದೇಹಕ್ಕೆ ಕುಟುಂಬಿಕರ, ಗಣ್ಯರ ಸಮ್ಮುಖ ಅಂತಿಮ ನಮನ ಸಲ್ಲಿಸಿ, ಅಗ್ನಿ ಸ್ಪರ್ಶ ಮಾಡಲಾಯಿತು.

ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾಜಿ ಸಚಿವರಾದ ವಿನಯಕುಮಾರ್‌ ಸೊರಕೆ ಮಾಜಿ ಶಾಸಕ ಲಾಲಾಜಿ ಆರ್‌ ಮೆಂಡನ್‌ ಹಿಂದೂ ಮುಖಂಡ ಮಹೇಶ್‌ ಶೆಟ್ಟಿ ತಿಮರೋಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್‌ ಹೆಗ್ಡೆ ಕಲ್ಯ, ಹಳೆ ಮಾರಿಯಮ್ಮ ದೇಗುಲದ ಮೊಕ್ತೇಸರ ಪ್ರಸಾದ್‌ ಶೆಣೈ, ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದ ಆಡಳಿತಾಧಿಕಾರಿ ಅರುಣ್ ಕುಮಾರ್‌ ಬಿಕೆ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಉದ್ಯಮಿಗಳು, ಲೀಲಾಧರ ಶೆಟ್ಟಿಯವರ ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು.

ಕಾಪು ಪೇಟೆ ಬಂದ್:‌ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರ ನಿಧನದ ಪ್ರಯುಕ್ತ ಕಾಪು ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಮಾಲೀಕರು ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಿದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

8 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

10 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

10 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

10 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

10 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago