Featured

ಕಾಪು : ಸಮಾಜ ರತ್ನ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಪತ್ನಿ ವಸುಂಧರಾ ಶೆಟ್ಟಿ ಪಂಚಭೂತದಲ್ಲಿ ಲೀನ – vishwanews24

ಸಮಾಜ ರತ್ನ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಪತ್ನಿ ವಸುಂಧರಾ ಶೆಟ್ಟಿ ಪಂಚಭೂತದಲ್ಲಿ ಲೀನ..

ಬೃಹತ್‌ ಮೆರವಣಿಗೆಯಲ್ಲಿ ಅಂತಿಮ ವಿದಾಯ..

ಸ್ವಯಂ ಪ್ರೇರಿತವಾಗಿ ಕಾಪು ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟು ಬಂದ್‌ ..

ಕಾಪು : ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾದ ಕಾಪುವಿನ ಪ್ರಖ್ಯಾತ ನಾಟಕ ಸಂಸ್ಥೆ “ರಂಗತರಂಗ” ದ  ಸ್ಥಾಪಕ, ಖ್ಯಾತ ನಟ, ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಬುಧವಾರ ಸಂಜೆ ಕುಟುಂಬಿಕರ, ಗಣ್ಯರ, ಸಾವಿರಾರು ಅಭಿಮಾನಿಗಳ ಅಶ್ರು ತರ್ಪಣದೊಂದಿಗೆ ತಮ್ಮ ಮನೆ ಹಿಂಬದಿಯ ಗದ್ದೆಯಲ್ಲಿ ಪಂಚ ಭೂತಗಳಲ್ಲಿ ಲೀನವಾದರು.

ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ಕಾಪು ರಾಹೆ ೬೬ರ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನಿಂದ ಬೃಹತ್‌ ಮೆರವಣಿಗೆಯಲ್ಲಿ ಕರಂದಾಡಿ ಶ್ರೀ ರಾಮ ಪ್ರಾಥಮಿಕ ಶಾಲಾ ಮೈದಾನದವರೆಗೆ ಮೃತದೇಹಗಳನ್ನು ಕೊಂಡೊಯ್ಯಲಾಯಿತು.

ಶ್ರೀ ರಾಮ ಪ್ರಾಥಮಿಕ ಶಾಲಾ ಮೈದಾನದಲ್ಲಿ ದಿವಂಗತ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ದಿವಂಗತ ವಸುಂಧರಾ ಶೆಟ್ಟಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು.ಲೀಲಾಧರ ಶೆಟ್ಟಿಯವರ ಸಾವಿರಾರು ಅಭಿಮಾನಿಗಳು ಅಶ್ರುತರ್ಪಣದೊಂದಿಗೆ ಅಂತಿಮ ನಮನ ಸಲ್ಲಿಸಿದರು.

ಲೀಲಾಧರ ಶೆಟ್ಟಿಯವರ ಮನೆ ಹಿಂಬದಿಯ ಗದ್ದೆಯಲ್ಲಿ ದಂಪತಿಗಳ ಮೃತ ದೇಹಕ್ಕೆ ಕುಟುಂಬಿಕರ, ಗಣ್ಯರ ಸಮ್ಮುಖ ಅಂತಿಮ ನಮನ ಸಲ್ಲಿಸಿ, ಅಗ್ನಿ ಸ್ಪರ್ಶ ಮಾಡಲಾಯಿತು.

ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾಜಿ ಸಚಿವರಾದ ವಿನಯಕುಮಾರ್‌ ಸೊರಕೆ ಮಾಜಿ ಶಾಸಕ ಲಾಲಾಜಿ ಆರ್‌ ಮೆಂಡನ್‌ ಹಿಂದೂ ಮುಖಂಡ ಮಹೇಶ್‌ ಶೆಟ್ಟಿ ತಿಮರೋಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್‌ ಹೆಗ್ಡೆ ಕಲ್ಯ, ಹಳೆ ಮಾರಿಯಮ್ಮ ದೇಗುಲದ ಮೊಕ್ತೇಸರ ಪ್ರಸಾದ್‌ ಶೆಣೈ, ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದ ಆಡಳಿತಾಧಿಕಾರಿ ಅರುಣ್ ಕುಮಾರ್‌ ಬಿಕೆ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಉದ್ಯಮಿಗಳು, ಲೀಲಾಧರ ಶೆಟ್ಟಿಯವರ ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು.

ಕಾಪು ಪೇಟೆ ಬಂದ್:‌ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರ ನಿಧನದ ಪ್ರಯುಕ್ತ ಕಾಪು ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಮಾಲೀಕರು ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago