ಕಾಪು : ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾದ ಕಾಪುವಿನ ಪ್ರಖ್ಯಾತ ನಾಟಕ ಸಂಸ್ಥೆ “ರಂಗತರಂಗ” ದ ಸ್ಥಾಪಕ, ಖ್ಯಾತ ನಟ, ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಬುಧವಾರ ಸಂಜೆ ಕುಟುಂಬಿಕರ, ಗಣ್ಯರ, ಸಾವಿರಾರು ಅಭಿಮಾನಿಗಳ ಅಶ್ರು ತರ್ಪಣದೊಂದಿಗೆ ತಮ್ಮ ಮನೆ ಹಿಂಬದಿಯ ಗದ್ದೆಯಲ್ಲಿ ಪಂಚ ಭೂತಗಳಲ್ಲಿ ಲೀನವಾದರು.
ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ಕಾಪು ರಾಹೆ ೬೬ರ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನಿಂದ ಬೃಹತ್ ಮೆರವಣಿಗೆಯಲ್ಲಿ ಕರಂದಾಡಿ ಶ್ರೀ ರಾಮ ಪ್ರಾಥಮಿಕ ಶಾಲಾ ಮೈದಾನದವರೆಗೆ ಮೃತದೇಹಗಳನ್ನು ಕೊಂಡೊಯ್ಯಲಾಯಿತು.
ಶ್ರೀ ರಾಮ ಪ್ರಾಥಮಿಕ ಶಾಲಾ ಮೈದಾನದಲ್ಲಿ ದಿವಂಗತ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ದಿವಂಗತ ವಸುಂಧರಾ ಶೆಟ್ಟಿಯವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು.ಲೀಲಾಧರ ಶೆಟ್ಟಿಯವರ ಸಾವಿರಾರು ಅಭಿಮಾನಿಗಳು ಅಶ್ರುತರ್ಪಣದೊಂದಿಗೆ ಅಂತಿಮ ನಮನ ಸಲ್ಲಿಸಿದರು.
ಲೀಲಾಧರ ಶೆಟ್ಟಿಯವರ ಮನೆ ಹಿಂಬದಿಯ ಗದ್ದೆಯಲ್ಲಿ ದಂಪತಿಗಳ ಮೃತ ದೇಹಕ್ಕೆ ಕುಟುಂಬಿಕರ, ಗಣ್ಯರ ಸಮ್ಮುಖ ಅಂತಿಮ ನಮನ ಸಲ್ಲಿಸಿ, ಅಗ್ನಿ ಸ್ಪರ್ಶ ಮಾಡಲಾಯಿತು.
ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಹಳೆ ಮಾರಿಯಮ್ಮ ದೇಗುಲದ ಮೊಕ್ತೇಸರ ಪ್ರಸಾದ್ ಶೆಣೈ, ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇಗುಲದ ಆಡಳಿತಾಧಿಕಾರಿ ಅರುಣ್ ಕುಮಾರ್ ಬಿಕೆ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಉದ್ಯಮಿಗಳು, ಲೀಲಾಧರ ಶೆಟ್ಟಿಯವರ ಸಾವಿರಾರು ಅಭಿಮಾನಿಗಳು ಉಪಸ್ಥಿತರಿದ್ದರು.
ಕಾಪು ಪೇಟೆ ಬಂದ್: ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರ ನಿಧನದ ಪ್ರಯುಕ್ತ ಕಾಪು ಪೇಟೆಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಮಾಲೀಕರು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿದ್ದರು.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…