Featured

ಕಾಪು : ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಕಡಲ್ಕೊರೆತ ದ ಭೀತಿ ; ವಿಳಂಬ ಕಾಮಗಾರಿ – ಸರಕಾರ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ – Vishwanews24

ಈ ಸಮಸ್ಯೆಗೆ ಎರಡು ದಿನದಲ್ಲಿ ಪರಿಹಾರ ನೀಡದಿದ್ದಲ್ಲಿ ಕರಾವಳಿಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ : ಸೊರಕೆ

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಕಡಲ್ಕೊರೆತ ದ ಭೀತಿಯಿಂದ ಆತಂಕದಿಂದ ದಿನಗಳೆಯುವ ಪರಿಸ್ಥಿತಿ ಉಂಟಾಗಿದ್ದು ಸರಕಾರ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ ಖಂಡಿಸಿ ಸ್ಥಳೀಯರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಈ ಹಿಂದೆ ಸಮುದ್ರ ದಡದಲ್ಲಿ ಹಾಕಲಾಗಿದ್ದ ತಡೆಗೋಡೆಯನ್ನು ತೆರವುಗೊಳಿಸಿ, ಹೊಸತಾಗಿ ಸದೃಢವಾದ ತಡೆಗೋಡೆ ನಿರ್ಮಿಸಿಕೊಡುತ್ತೇವೆ ಎಂದು ವಾಗ್ದಾನ ಮಾಡಿ ಯಾವುದೇ ರೀತಿಯ ಕಾಮಗಾರಿಯನ್ನು ಕೈಗೊಳ್ಳದ ಪರಿಣಾಮ ಈ ಪರಿಸರದ 8 ರಿಂದ 10 ಮನೆಗಳು ಮತ್ತು ಹಲವಾರು ತೆಂಗಿನಮರಗಳು ನೀರು ಪಾಲಾಗುವ ಹಂತದಲ್ಲಿವೆ.

ಇದರಿಂದಾಗಿ ಸ್ಥಳೀಯ ನಿವಾಸಿಗಳು ಆತಂಕದಿಂದ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗೆ ಎರಡು ದಿನದಲ್ಲಿ ಪರಿಹಾರ ನೀಡದಿದ್ದಲ್ಲಿ ಕರಾವಳಿಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿ ಇಲ್ಲಿನ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಯವರಿಗೆ, ಕಾರ್ಯ ನಿರ್ವಾಹಕ ಅಭಿಯಂತರರಿಗೆ ಮತ್ತು ಗುತ್ತಿಗೆದಾರರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದು, ಎಲ್ಲರೂ ಶೀಘ್ರದಲ್ಲೇ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಇದೀಗ 3 ತಿಂಗಳು ಕಳೆದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವ ಕಾರಣ ಮತ್ತು ಮಳೆಗಾಲವು ಪ್ರಾರಂಭವಾಗಿದ್ದು ಮನೆ-ಮರಗಳು ಸಮುದ್ರ ಪಾಲಾಗುವ ಭೀತಿಯಿದೆ ಎಂದು ಆರೋಪಿಸಿದರು.

ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ, ಫರ್ಜಾನಾ, ಶೋಭಾ ಬಂಗೇರ, ಸ್ಥಳೀಯರಾದ ರಾಜೇಶ್ ಮೆಂಡನ್, ಸುಧಾಕರ ಸಾಲ್ಯಾನ್, ಅಶ್ವಿನಿ ಬಂಗೇರ, ಲವ ಕರ್ಕೇರ, ದೇವರಾಜ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

15 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

16 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

16 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

16 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

18 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

19 hours ago