ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಕಡಲ್ಕೊರೆತ ದ ಭೀತಿಯಿಂದ ಆತಂಕದಿಂದ ದಿನಗಳೆಯುವ ಪರಿಸ್ಥಿತಿ ಉಂಟಾಗಿದ್ದು ಸರಕಾರ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ ಖಂಡಿಸಿ ಸ್ಥಳೀಯರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಈ ಹಿಂದೆ ಸಮುದ್ರ ದಡದಲ್ಲಿ ಹಾಕಲಾಗಿದ್ದ ತಡೆಗೋಡೆಯನ್ನು ತೆರವುಗೊಳಿಸಿ, ಹೊಸತಾಗಿ ಸದೃಢವಾದ ತಡೆಗೋಡೆ ನಿರ್ಮಿಸಿಕೊಡುತ್ತೇವೆ ಎಂದು ವಾಗ್ದಾನ ಮಾಡಿ ಯಾವುದೇ ರೀತಿಯ ಕಾಮಗಾರಿಯನ್ನು ಕೈಗೊಳ್ಳದ ಪರಿಣಾಮ ಈ ಪರಿಸರದ 8 ರಿಂದ 10 ಮನೆಗಳು ಮತ್ತು ಹಲವಾರು ತೆಂಗಿನಮರಗಳು ನೀರು ಪಾಲಾಗುವ ಹಂತದಲ್ಲಿವೆ.
ಇದರಿಂದಾಗಿ ಸ್ಥಳೀಯ ನಿವಾಸಿಗಳು ಆತಂಕದಿಂದ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗೆ ಎರಡು ದಿನದಲ್ಲಿ ಪರಿಹಾರ ನೀಡದಿದ್ದಲ್ಲಿ ಕರಾವಳಿಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿ ಇಲ್ಲಿನ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಯವರಿಗೆ, ಕಾರ್ಯ ನಿರ್ವಾಹಕ ಅಭಿಯಂತರರಿಗೆ ಮತ್ತು ಗುತ್ತಿಗೆದಾರರಿಗೆ ಕರೆ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದು, ಎಲ್ಲರೂ ಶೀಘ್ರದಲ್ಲೇ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಇದೀಗ 3 ತಿಂಗಳು ಕಳೆದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವ ಕಾರಣ ಮತ್ತು ಮಳೆಗಾಲವು ಪ್ರಾರಂಭವಾಗಿದ್ದು ಮನೆ-ಮರಗಳು ಸಮುದ್ರ ಪಾಲಾಗುವ ಭೀತಿಯಿದೆ ಎಂದು ಆರೋಪಿಸಿದರು.
ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ, ಫರ್ಜಾನಾ, ಶೋಭಾ ಬಂಗೇರ, ಸ್ಥಳೀಯರಾದ ರಾಜೇಶ್ ಮೆಂಡನ್, ಸುಧಾಕರ ಸಾಲ್ಯಾನ್, ಅಶ್ವಿನಿ ಬಂಗೇರ, ಲವ ಕರ್ಕೇರ, ದೇವರಾಜ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…