ಕಾಪು : ಕಾಪುವಿನಿಂದ ಎಂಟು ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಬಂಡೆಗೆ ಡಿಕ್ಕಿ ಹೊಡೆದು ಅಪಾಯದಲ್ಲಿದ್ದ ಮೀನುಗಾರಿಕಾ ಬೋಟ್’ ನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿರುವ ಘಟನೆ ನಡೆದಿದೆ.
ಬಡನಿಡಿಯೂರಿನ ಭಾಸ್ಕರ್ ಎಂ. ಪುತ್ರನ್ ಎಂಬುವವರ ಒಡೆತನದ ಸ್ವರ್ಣಗೌರಿ ದೋಣಿ ಡಿ.30 ರಂದು ರಾತ್ರಿ ಮಲ್ಪೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಜ.3ರಂದು ಕಾಪುವಿನಿಂದ ಎಂಟು ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಬಂಡೆಗೆ ತಾಗಿ ನೀರು ರಭಸವಾಗಿ ಹರಿಯಲಾರಂಭಿಸಿತ್ತು. ಹಲಗೆ ಹಾನಿಗೊಳಗಾದ ಕಾರಣ ದೋಣಿಯೊಳಗೆ ನೀರು ಬಂದಿದೆ. ಈ ವೇಳೆ ಸ್ವರ್ಣಗೌರಿ ದೋಣಿಯ ತಾಂಡೇಲಾ ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವರುಣ ದೋಣಿಗೆ ಮಾಹಿತಿ ರವಾನಿಸಿದರು. ವರುಣ ದೋಣಿಯಲ್ಲಿದ್ದ ಮೀನುಗಾರರು ಸ್ವರ್ಣಗೌರಿ ದೋಣಿಯಲ್ಲಿದ್ದ ಸಿಬ್ಬಂದಿಯ ರಕ್ಷಣೆಗೆ ಧಾವಿಸಿ ಎಲ್ಲರನ್ನೂ ರಕ್ಷಿಸಿದರು. ಆದರೆ, ಬಂಡೆಗೆ ಡಿಕ್ಕಿ ಹೊಡೆದ ದೋಣಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಆದ್ದರಿಂದ ದೋಣಿಯಲ್ಲಿದ್ದ ಆರು ಸೆಟ್ ಬಲೆ, ಹಗ್ಗ, ಡ್ರಮ್ ವಿಂಚ್, ಇಂಜಿನ್ ಹಾಗೂ 2000 ಲೀಟರ್ ಡೀಸೆಲ್ ಸಮುದ್ರದಲ್ಲಿ ಕೊಚ್ಚಿ ಹೋಗಿವೆ. ಘಟನೆಯಿಂದ ಸುಮಾರು 30 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…