ಕಾಪು : ಕಾಪುವಿನಿಂದ ಎಂಟು ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಬಂಡೆಗೆ ಡಿಕ್ಕಿ ಹೊಡೆದು ಅಪಾಯದಲ್ಲಿದ್ದ ಮೀನುಗಾರಿಕಾ ಬೋಟ್’ ನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿರುವ ಘಟನೆ ನಡೆದಿದೆ.
ಬಡನಿಡಿಯೂರಿನ ಭಾಸ್ಕರ್ ಎಂ. ಪುತ್ರನ್ ಎಂಬುವವರ ಒಡೆತನದ ಸ್ವರ್ಣಗೌರಿ ದೋಣಿ ಡಿ.30 ರಂದು ರಾತ್ರಿ ಮಲ್ಪೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಜ.3ರಂದು ಕಾಪುವಿನಿಂದ ಎಂಟು ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಬಂಡೆಗೆ ತಾಗಿ ನೀರು ರಭಸವಾಗಿ ಹರಿಯಲಾರಂಭಿಸಿತ್ತು. ಹಲಗೆ ಹಾನಿಗೊಳಗಾದ ಕಾರಣ ದೋಣಿಯೊಳಗೆ ನೀರು ಬಂದಿದೆ. ಈ ವೇಳೆ ಸ್ವರ್ಣಗೌರಿ ದೋಣಿಯ ತಾಂಡೇಲಾ ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವರುಣ ದೋಣಿಗೆ ಮಾಹಿತಿ ರವಾನಿಸಿದರು. ವರುಣ ದೋಣಿಯಲ್ಲಿದ್ದ ಮೀನುಗಾರರು ಸ್ವರ್ಣಗೌರಿ ದೋಣಿಯಲ್ಲಿದ್ದ ಸಿಬ್ಬಂದಿಯ ರಕ್ಷಣೆಗೆ ಧಾವಿಸಿ ಎಲ್ಲರನ್ನೂ ರಕ್ಷಿಸಿದರು. ಆದರೆ, ಬಂಡೆಗೆ ಡಿಕ್ಕಿ ಹೊಡೆದ ದೋಣಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
ಆದ್ದರಿಂದ ದೋಣಿಯಲ್ಲಿದ್ದ ಆರು ಸೆಟ್ ಬಲೆ, ಹಗ್ಗ, ಡ್ರಮ್ ವಿಂಚ್, ಇಂಜಿನ್ ಹಾಗೂ 2000 ಲೀಟರ್ ಡೀಸೆಲ್ ಸಮುದ್ರದಲ್ಲಿ ಕೊಚ್ಚಿ ಹೋಗಿವೆ. ಘಟನೆಯಿಂದ ಸುಮಾರು 30 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…