Featured

ಕಾಪು: ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ : ದೂರು ದಾಖಲು – Vishwanews24

ಕಾಪು: ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ದೂರು ದಾಖಲು

ಕಾಪು : ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಕಾಪುವಿನ ಪಡು ಗ್ರಾಮದ ದಯಾನಂದ ಸುವರ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ತಾಯಿ ಜಾನಕಿರವರಿಗೆ ಕಾಪು ತಾಲೂಕಿನ ಪಡು ಗ್ರಾಮದ ಸರ್ವೆ ನಂಬ್ರ 66/10 ರಲ್ಲಿ ಸ್ಥಿರಾಸ್ತಿ ಹೊಂದಿದ್ದು, ಅವರ ಮರಣ ನಂತರ ವಾರೀಸು ನೆಲೆಯಲ್ಲಿ ಸ್ಥಿರಾಸ್ತಿಯನ್ನು ದಯಾನಂದ ಸುವಣ9 ಅವರು ಅನುಭವಿಸಿಕೊಂಡು ಬರುತ್ತಿದ್ದಾರೆ. ಸ್ಥಿರಾಸ್ತಿಯಲ್ಲಿರುವ ಮನೆಯಲ್ಲಿ 5 ವಷ9ದ ಹಿಂದೆ ಆರೋಪಿ ಹೇಮಂತ್ ಕೋಟ್ಯಾನ್ ಬಾಡಿಗೆಗೆ ವಾಸವಾಗಿದ್ದು ಬಳಿಕ ಮನೆ ಬಿಟ್ಟು ಬೇರೆ ಕಡೆಗೆ ಹೋಗಿರುತ್ತಾರೆ. ನಂತರ ಆರೋಪಿ ಲೀಲಾಧರ ಕೋಟ್ಯಾನ್, ಯಶೋಧ ಇವರು ಮನೆಯಲ್ಲಿ ಬಾಯ್ದೆರೆಯಲ್ಲಿ ವಾಸಮಾಡಿಕೊಂಡಿದ್ದು, ಬಳಿಕ ಮನೆಯನ್ನು ಬಿಟ್ಟುಕೊಡದೇ ಇದ್ದು ಈ ಬಗ್ಗೆ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಲ್ಲದೆ ಸ್ಥಿರಾಸ್ತೀಯಲ್ಲಿರುವ ನಾಗಬನದ ಅಭಿವೃದ್ದಿ ಮತ್ತು ಜಿಣೊ9ದ್ಧಾರಕ್ಕಾಗಿ “ಶ್ರೀ ಆಶ್ವಥ ನಾರಾಯಣ ನಾಗ ಸನ್ನಿಧಿ ಟ್ರಸ್ಟ್” ಇದ್ದು ಪೂಜಾ ವಿಧಾನಗಳನ್ನು ನೆಡೆಸಿಕೊಂಡು ಬರುತ್ತಾರೆ. ದಯಾನಂದ ಸುವರ್ಣ ಅವರು ಟ್ರಸ್ಟ್ ನ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ನಾಗಬನದ ಜಿರ್ಣೋದ್ದಾರಕ್ಕಾಗಿ ಸರಕಾರದಿಂದ ಬರುವ ಅನುಧಾನ ಪಡೆಯಲು ಅರ್ಜಿ ಸಲ್ಲಿಸಿದ್ದರು. ಹೇಮಂತ್ ಕೋಟ್ಯಾನ್ ಮತ್ತು ಯಶೋಧ ಸೇರಿ ಸರಕಾರಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಆಕ್ಷೇಪಣೆಯನ್ನು ಸಲ್ಲಿಸಿ, ಮಹಜರುಗಳಿಗೆ ನಕಲಿ ಸಹಿಗಳನ್ನು ತಯಾರಿಸಿ ಅನುದಾನ ಮಂಜೂರಾಗದಂತೆ ಮಾಡಿದ್ದಾರೆ. ಆರೋಪಿಗಳು ಈ ಎಲ್ಲಾ ವಿಚಾರಗಳಿಂದ ದಯಾನಂದ ಸುವರ್ಣ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಷ್ಟ ಹಾಗೂ ನಂಬಿಕೆ ದ್ರೋಹ ಎಸಗಿರುವುದಾಗಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago