ಕಾಪು : ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಕಾಪುವಿನ ಪಡು ಗ್ರಾಮದ ದಯಾನಂದ ಸುವರ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ತಾಯಿ ಜಾನಕಿರವರಿಗೆ ಕಾಪು ತಾಲೂಕಿನ ಪಡು ಗ್ರಾಮದ ಸರ್ವೆ ನಂಬ್ರ 66/10 ರಲ್ಲಿ ಸ್ಥಿರಾಸ್ತಿ ಹೊಂದಿದ್ದು, ಅವರ ಮರಣ ನಂತರ ವಾರೀಸು ನೆಲೆಯಲ್ಲಿ ಸ್ಥಿರಾಸ್ತಿಯನ್ನು ದಯಾನಂದ ಸುವಣ9 ಅವರು ಅನುಭವಿಸಿಕೊಂಡು ಬರುತ್ತಿದ್ದಾರೆ. ಸ್ಥಿರಾಸ್ತಿಯಲ್ಲಿರುವ ಮನೆಯಲ್ಲಿ 5 ವಷ9ದ ಹಿಂದೆ ಆರೋಪಿ ಹೇಮಂತ್ ಕೋಟ್ಯಾನ್ ಬಾಡಿಗೆಗೆ ವಾಸವಾಗಿದ್ದು ಬಳಿಕ ಮನೆ ಬಿಟ್ಟು ಬೇರೆ ಕಡೆಗೆ ಹೋಗಿರುತ್ತಾರೆ. ನಂತರ ಆರೋಪಿ ಲೀಲಾಧರ ಕೋಟ್ಯಾನ್, ಯಶೋಧ ಇವರು ಮನೆಯಲ್ಲಿ ಬಾಯ್ದೆರೆಯಲ್ಲಿ ವಾಸಮಾಡಿಕೊಂಡಿದ್ದು, ಬಳಿಕ ಮನೆಯನ್ನು ಬಿಟ್ಟುಕೊಡದೇ ಇದ್ದು ಈ ಬಗ್ಗೆ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅಲ್ಲದೆ ಸ್ಥಿರಾಸ್ತೀಯಲ್ಲಿರುವ ನಾಗಬನದ ಅಭಿವೃದ್ದಿ ಮತ್ತು ಜಿಣೊ9ದ್ಧಾರಕ್ಕಾಗಿ “ಶ್ರೀ ಆಶ್ವಥ ನಾರಾಯಣ ನಾಗ ಸನ್ನಿಧಿ ಟ್ರಸ್ಟ್” ಇದ್ದು ಪೂಜಾ ವಿಧಾನಗಳನ್ನು ನೆಡೆಸಿಕೊಂಡು ಬರುತ್ತಾರೆ. ದಯಾನಂದ ಸುವರ್ಣ ಅವರು ಟ್ರಸ್ಟ್ ನ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ನಾಗಬನದ ಜಿರ್ಣೋದ್ದಾರಕ್ಕಾಗಿ ಸರಕಾರದಿಂದ ಬರುವ ಅನುಧಾನ ಪಡೆಯಲು ಅರ್ಜಿ ಸಲ್ಲಿಸಿದ್ದರು. ಹೇಮಂತ್ ಕೋಟ್ಯಾನ್ ಮತ್ತು ಯಶೋಧ ಸೇರಿ ಸರಕಾರಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಆಕ್ಷೇಪಣೆಯನ್ನು ಸಲ್ಲಿಸಿ, ಮಹಜರುಗಳಿಗೆ ನಕಲಿ ಸಹಿಗಳನ್ನು ತಯಾರಿಸಿ ಅನುದಾನ ಮಂಜೂರಾಗದಂತೆ ಮಾಡಿದ್ದಾರೆ. ಆರೋಪಿಗಳು ಈ ಎಲ್ಲಾ ವಿಚಾರಗಳಿಂದ ದಯಾನಂದ ಸುವರ್ಣ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಷ್ಟ ಹಾಗೂ ನಂಬಿಕೆ ದ್ರೋಹ ಎಸಗಿರುವುದಾಗಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…