ಕಾಪು : ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಕಾಪುವಿನ ಪಡು ಗ್ರಾಮದ ದಯಾನಂದ ಸುವರ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ತಾಯಿ ಜಾನಕಿರವರಿಗೆ ಕಾಪು ತಾಲೂಕಿನ ಪಡು ಗ್ರಾಮದ ಸರ್ವೆ ನಂಬ್ರ 66/10 ರಲ್ಲಿ ಸ್ಥಿರಾಸ್ತಿ ಹೊಂದಿದ್ದು, ಅವರ ಮರಣ ನಂತರ ವಾರೀಸು ನೆಲೆಯಲ್ಲಿ ಸ್ಥಿರಾಸ್ತಿಯನ್ನು ದಯಾನಂದ ಸುವಣ9 ಅವರು ಅನುಭವಿಸಿಕೊಂಡು ಬರುತ್ತಿದ್ದಾರೆ. ಸ್ಥಿರಾಸ್ತಿಯಲ್ಲಿರುವ ಮನೆಯಲ್ಲಿ 5 ವಷ9ದ ಹಿಂದೆ ಆರೋಪಿ ಹೇಮಂತ್ ಕೋಟ್ಯಾನ್ ಬಾಡಿಗೆಗೆ ವಾಸವಾಗಿದ್ದು ಬಳಿಕ ಮನೆ ಬಿಟ್ಟು ಬೇರೆ ಕಡೆಗೆ ಹೋಗಿರುತ್ತಾರೆ. ನಂತರ ಆರೋಪಿ ಲೀಲಾಧರ ಕೋಟ್ಯಾನ್, ಯಶೋಧ ಇವರು ಮನೆಯಲ್ಲಿ ಬಾಯ್ದೆರೆಯಲ್ಲಿ ವಾಸಮಾಡಿಕೊಂಡಿದ್ದು, ಬಳಿಕ ಮನೆಯನ್ನು ಬಿಟ್ಟುಕೊಡದೇ ಇದ್ದು ಈ ಬಗ್ಗೆ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅಲ್ಲದೆ ಸ್ಥಿರಾಸ್ತೀಯಲ್ಲಿರುವ ನಾಗಬನದ ಅಭಿವೃದ್ದಿ ಮತ್ತು ಜಿಣೊ9ದ್ಧಾರಕ್ಕಾಗಿ “ಶ್ರೀ ಆಶ್ವಥ ನಾರಾಯಣ ನಾಗ ಸನ್ನಿಧಿ ಟ್ರಸ್ಟ್” ಇದ್ದು ಪೂಜಾ ವಿಧಾನಗಳನ್ನು ನೆಡೆಸಿಕೊಂಡು ಬರುತ್ತಾರೆ. ದಯಾನಂದ ಸುವರ್ಣ ಅವರು ಟ್ರಸ್ಟ್ ನ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ನಾಗಬನದ ಜಿರ್ಣೋದ್ದಾರಕ್ಕಾಗಿ ಸರಕಾರದಿಂದ ಬರುವ ಅನುಧಾನ ಪಡೆಯಲು ಅರ್ಜಿ ಸಲ್ಲಿಸಿದ್ದರು. ಹೇಮಂತ್ ಕೋಟ್ಯಾನ್ ಮತ್ತು ಯಶೋಧ ಸೇರಿ ಸರಕಾರಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಆಕ್ಷೇಪಣೆಯನ್ನು ಸಲ್ಲಿಸಿ, ಮಹಜರುಗಳಿಗೆ ನಕಲಿ ಸಹಿಗಳನ್ನು ತಯಾರಿಸಿ ಅನುದಾನ ಮಂಜೂರಾಗದಂತೆ ಮಾಡಿದ್ದಾರೆ. ಆರೋಪಿಗಳು ಈ ಎಲ್ಲಾ ವಿಚಾರಗಳಿಂದ ದಯಾನಂದ ಸುವರ್ಣ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಷ್ಟ ಹಾಗೂ ನಂಬಿಕೆ ದ್ರೋಹ ಎಸಗಿರುವುದಾಗಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…