Featured

ಕಾಪು: ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ : ದೂರು ದಾಖಲು – Vishwanews24

ಕಾಪು: ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ- ದೂರು ದಾಖಲು

ಕಾಪು : ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ಕಾಪುವಿನ ಪಡು ಗ್ರಾಮದ ದಯಾನಂದ ಸುವರ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ತಾಯಿ ಜಾನಕಿರವರಿಗೆ ಕಾಪು ತಾಲೂಕಿನ ಪಡು ಗ್ರಾಮದ ಸರ್ವೆ ನಂಬ್ರ 66/10 ರಲ್ಲಿ ಸ್ಥಿರಾಸ್ತಿ ಹೊಂದಿದ್ದು, ಅವರ ಮರಣ ನಂತರ ವಾರೀಸು ನೆಲೆಯಲ್ಲಿ ಸ್ಥಿರಾಸ್ತಿಯನ್ನು ದಯಾನಂದ ಸುವಣ9 ಅವರು ಅನುಭವಿಸಿಕೊಂಡು ಬರುತ್ತಿದ್ದಾರೆ. ಸ್ಥಿರಾಸ್ತಿಯಲ್ಲಿರುವ ಮನೆಯಲ್ಲಿ 5 ವಷ9ದ ಹಿಂದೆ ಆರೋಪಿ ಹೇಮಂತ್ ಕೋಟ್ಯಾನ್ ಬಾಡಿಗೆಗೆ ವಾಸವಾಗಿದ್ದು ಬಳಿಕ ಮನೆ ಬಿಟ್ಟು ಬೇರೆ ಕಡೆಗೆ ಹೋಗಿರುತ್ತಾರೆ. ನಂತರ ಆರೋಪಿ ಲೀಲಾಧರ ಕೋಟ್ಯಾನ್, ಯಶೋಧ ಇವರು ಮನೆಯಲ್ಲಿ ಬಾಯ್ದೆರೆಯಲ್ಲಿ ವಾಸಮಾಡಿಕೊಂಡಿದ್ದು, ಬಳಿಕ ಮನೆಯನ್ನು ಬಿಟ್ಟುಕೊಡದೇ ಇದ್ದು ಈ ಬಗ್ಗೆ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಲ್ಲದೆ ಸ್ಥಿರಾಸ್ತೀಯಲ್ಲಿರುವ ನಾಗಬನದ ಅಭಿವೃದ್ದಿ ಮತ್ತು ಜಿಣೊ9ದ್ಧಾರಕ್ಕಾಗಿ “ಶ್ರೀ ಆಶ್ವಥ ನಾರಾಯಣ ನಾಗ ಸನ್ನಿಧಿ ಟ್ರಸ್ಟ್” ಇದ್ದು ಪೂಜಾ ವಿಧಾನಗಳನ್ನು ನೆಡೆಸಿಕೊಂಡು ಬರುತ್ತಾರೆ. ದಯಾನಂದ ಸುವರ್ಣ ಅವರು ಟ್ರಸ್ಟ್ ನ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ನಾಗಬನದ ಜಿರ್ಣೋದ್ದಾರಕ್ಕಾಗಿ ಸರಕಾರದಿಂದ ಬರುವ ಅನುಧಾನ ಪಡೆಯಲು ಅರ್ಜಿ ಸಲ್ಲಿಸಿದ್ದರು. ಹೇಮಂತ್ ಕೋಟ್ಯಾನ್ ಮತ್ತು ಯಶೋಧ ಸೇರಿ ಸರಕಾರಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಆಕ್ಷೇಪಣೆಯನ್ನು ಸಲ್ಲಿಸಿ, ಮಹಜರುಗಳಿಗೆ ನಕಲಿ ಸಹಿಗಳನ್ನು ತಯಾರಿಸಿ ಅನುದಾನ ಮಂಜೂರಾಗದಂತೆ ಮಾಡಿದ್ದಾರೆ. ಆರೋಪಿಗಳು ಈ ಎಲ್ಲಾ ವಿಚಾರಗಳಿಂದ ದಯಾನಂದ ಸುವರ್ಣ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಷ್ಟ ಹಾಗೂ ನಂಬಿಕೆ ದ್ರೋಹ ಎಸಗಿರುವುದಾಗಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

15 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

16 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

16 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

17 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

17 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago