ಕಾಪು : ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಕಾಪುವಿನ ಪಡು ಗ್ರಾಮದ ದಯಾನಂದ ಸುವರ್ಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ತಾಯಿ ಜಾನಕಿರವರಿಗೆ ಕಾಪು ತಾಲೂಕಿನ ಪಡು ಗ್ರಾಮದ ಸರ್ವೆ ನಂಬ್ರ 66/10 ರಲ್ಲಿ ಸ್ಥಿರಾಸ್ತಿ ಹೊಂದಿದ್ದು, ಅವರ ಮರಣ ನಂತರ ವಾರೀಸು ನೆಲೆಯಲ್ಲಿ ಸ್ಥಿರಾಸ್ತಿಯನ್ನು ದಯಾನಂದ ಸುವಣ9 ಅವರು ಅನುಭವಿಸಿಕೊಂಡು ಬರುತ್ತಿದ್ದಾರೆ. ಸ್ಥಿರಾಸ್ತಿಯಲ್ಲಿರುವ ಮನೆಯಲ್ಲಿ 5 ವಷ9ದ ಹಿಂದೆ ಆರೋಪಿ ಹೇಮಂತ್ ಕೋಟ್ಯಾನ್ ಬಾಡಿಗೆಗೆ ವಾಸವಾಗಿದ್ದು ಬಳಿಕ ಮನೆ ಬಿಟ್ಟು ಬೇರೆ ಕಡೆಗೆ ಹೋಗಿರುತ್ತಾರೆ. ನಂತರ ಆರೋಪಿ ಲೀಲಾಧರ ಕೋಟ್ಯಾನ್, ಯಶೋಧ ಇವರು ಮನೆಯಲ್ಲಿ ಬಾಯ್ದೆರೆಯಲ್ಲಿ ವಾಸಮಾಡಿಕೊಂಡಿದ್ದು, ಬಳಿಕ ಮನೆಯನ್ನು ಬಿಟ್ಟುಕೊಡದೇ ಇದ್ದು ಈ ಬಗ್ಗೆ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅಲ್ಲದೆ ಸ್ಥಿರಾಸ್ತೀಯಲ್ಲಿರುವ ನಾಗಬನದ ಅಭಿವೃದ್ದಿ ಮತ್ತು ಜಿಣೊ9ದ್ಧಾರಕ್ಕಾಗಿ “ಶ್ರೀ ಆಶ್ವಥ ನಾರಾಯಣ ನಾಗ ಸನ್ನಿಧಿ ಟ್ರಸ್ಟ್” ಇದ್ದು ಪೂಜಾ ವಿಧಾನಗಳನ್ನು ನೆಡೆಸಿಕೊಂಡು ಬರುತ್ತಾರೆ. ದಯಾನಂದ ಸುವರ್ಣ ಅವರು ಟ್ರಸ್ಟ್ ನ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ನಾಗಬನದ ಜಿರ್ಣೋದ್ದಾರಕ್ಕಾಗಿ ಸರಕಾರದಿಂದ ಬರುವ ಅನುಧಾನ ಪಡೆಯಲು ಅರ್ಜಿ ಸಲ್ಲಿಸಿದ್ದರು. ಹೇಮಂತ್ ಕೋಟ್ಯಾನ್ ಮತ್ತು ಯಶೋಧ ಸೇರಿ ಸರಕಾರಿ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಆಕ್ಷೇಪಣೆಯನ್ನು ಸಲ್ಲಿಸಿ, ಮಹಜರುಗಳಿಗೆ ನಕಲಿ ಸಹಿಗಳನ್ನು ತಯಾರಿಸಿ ಅನುದಾನ ಮಂಜೂರಾಗದಂತೆ ಮಾಡಿದ್ದಾರೆ. ಆರೋಪಿಗಳು ಈ ಎಲ್ಲಾ ವಿಚಾರಗಳಿಂದ ದಯಾನಂದ ಸುವರ್ಣ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಷ್ಟ ಹಾಗೂ ನಂಬಿಕೆ ದ್ರೋಹ ಎಸಗಿರುವುದಾಗಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…