ಕಾಪು : ಔದ್ಯೋಗಿಕ ನೆಲೆಯಲ್ಲಿ ಕ್ರಿಯಾಶೀಲತೆಯನ್ನು ಹೊಂದಿ ಅದರಿಂದ ಬಂದ ಒಂದಷ್ಟು ಅಂಶವನ್ನು ಸಮಾಜ ಸೇವೆಗೆ ಬಳಸುವ ಮನಸ್ಸು ಎಲ್ಲರಿಗೂ ಬರುವುದಿಲ್ಲ ಅಂತಹ ನಿಸ್ವಾರ್ಥ ಉದ್ದೇಶದ ಸಾಧಕರನ್ನು ಗುರುತಿಸುವುದು ಸಂತಸ ತಂದಿದೆ ಎಂದು ಮಜೂರು ಮಲ್ಲಾರು ಮಸೀದಿಯ ಧರ್ಮಗುರು ಅಬ್ದುಲ್ ರಶೀದ್ ಸಖಾಫಿ ಹೇಳಿದರು.
ಅವರು ಗುರುವಾರ ಕಾಪು ಚಂದ್ರನಗರ ಬಟರ್ ಫ್ಲೈ ಅತಿಥಿ ಗೃಹದ ಸಭಾಂಗಣದಲ್ಲಿ ಕಾಪು ಅಭಿನಂದನ ಸಮಿತಿಯಿಂದ ನಡೆದ ಸಾಧಕರ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸನ್ಮಾನ: ಯುಎಇ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ದುಬೈ ವತಿಯಿಂದ ಸಮಾಜ ಸೇವೆಗಾಗಿ ಕೊಡಮಾ ಡುವ 2023 ಸಾಲಿನ ದುಬೈ ಗಡಿನಾಡು ಉತ್ಸವದಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಕಾಪುವಿನ ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ ಹಾಗೂ ಸಮಾಜ ಬಂಧು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಕಲಿಮ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸಿಬ್ಗತ್ ಉಲ್ಲಾ ಶರೀಫ್ ಹಾಗೂ ಕೇರಳ ರಾಜ್ಯದ ಗಡಿನಾಡ ಸಾಹಿತ್ಯ ಅಕಾಡೆಮಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಾಪುವಿನ ಸಮಾಜ ಸೇವಕ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರನ್ನು ಗಣ್ಯರು, ಅಭಿಮಾನಿಗಳು ಸನ್ಮಾನಿಸಿದರು.
ಈ ಸಂದರ್ಭ ಪರ್ಕಳ ಬಳಕೆದಾರರ ವೇದಿಕೆಯ ಸ್ಥಾಪಕರಾದ ಅಬೂಬಕ್ಕರ್ ಹಾಜಿ ಪರ್ಕಳ, ವಿಶ್ವನಾಥ ಪೂಜಾರಿ ಗರಡಿಮನೆ, ಶೇಖರ್ ಬಿ. ಶೆಟ್ಟಿ ಕಳತ್ತೂರು, ಅರುಣಾಕರ ಶೆಟ್ಟಿ ಕಳತ್ತೂರು, ಚಂದ್ರನಗರ ಕ್ರೆಸೆಂಟ್ ಇಂಟನ್ರ್ಯಾಷನಲ್ ಸ್ಕೂಲ್ನ ಸ್ಥಾಪಕ ಅಧ್ಯಕ್ಷ ಸಂಶುದ್ದೀನ್ ಯೂಸುಫ್, ಕೆಪಿಸಿಸಿ ಎನ್ಆರ್ಐ ವಿಂಗ್ ಅಧ್ಯಕ್ಷ ಶೇಖ್ ವಾಹಿದ್ ದಾವೂದ್, ಉಮ್ಮರಬ್ಬ ಚಂದ್ರನಗರ, ಕ್ರೆಸೆಂಟ್ ಇಂಟರ್ನ್ಯಾಷನಲ್ ಸ್ಕೂಲ್ನ ಪ್ರಾಂಶುಪಾಲ ನವಾಬ್ ಉಪಸ್ಥಿತರಿದ್ದರು.
ಅಭಿನಂದನಾ ಸಮಿತಿ ಪ್ರಧಾನ ಸಂಚಾಲಕ ದಿವಾಕರ್ ಡಿ.ಶೆಟ್ಟಿ ಸ್ವಾಗತಿಸಿದರು. ದಿನೇಶ್ ಆಚಾರ್ಯ ಶಿರ್ವ ಅಭಿನಂದನಾ ಪತ್ರ ವಾಚಿಸಿದರು. ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…