Featured

ಕಾಪು: ಸಾಧಕರಿಗೆ ಅಭಿನಂದನೆ – vishwanews24

ಕಾಪು: ಸಾಧಕರಿಗೆ ಅಭಿನಂದನೆ

ಕಾಪು : ಔದ್ಯೋಗಿಕ ನೆಲೆಯಲ್ಲಿ ಕ್ರಿಯಾಶೀಲತೆಯನ್ನು ಹೊಂದಿ ಅದರಿಂದ ಬಂದ ಒಂದಷ್ಟು ಅಂಶವನ್ನು ಸಮಾಜ ಸೇವೆಗೆ ಬಳಸುವ ಮನಸ್ಸು ಎಲ್ಲರಿಗೂ ಬರುವುದಿಲ್ಲ ಅಂತಹ ನಿಸ್ವಾರ್ಥ ಉದ್ದೇಶದ ಸಾಧಕರನ್ನು ಗುರುತಿಸುವುದು ಸಂತಸ ತಂದಿದೆ ಎಂದು ಮಜೂರು ಮಲ್ಲಾರು ಮಸೀದಿಯ ಧರ್ಮಗುರು ಅಬ್ದುಲ್ ರಶೀದ್ ಸಖಾಫಿ ಹೇಳಿದರು.

ಅವರು ಗುರುವಾರ ಕಾಪು ಚಂದ್ರನಗರ ಬಟರ್ ಫ್ಲೈ ಅತಿಥಿ ಗೃಹದ ಸಭಾಂಗಣದಲ್ಲಿ ಕಾಪು ಅಭಿನಂದನ ಸಮಿತಿಯಿಂದ ನಡೆದ ಸಾಧಕರ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸನ್ಮಾನ: ಯುಎಇ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ದುಬೈ ವತಿಯಿಂದ ಸಮಾಜ ಸೇವೆಗಾಗಿ ಕೊಡಮಾ ಡುವ 2023 ಸಾಲಿನ ದುಬೈ ಗಡಿನಾಡು ಉತ್ಸವದಲ್ಲಿ ಯೂತ್ ಐಕಾನ್ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಕಾಪುವಿನ ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ ಹಾಗೂ ಸಮಾಜ ಬಂಧು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಕಲಿಮ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸಿಬ್ಗತ್ ಉಲ್ಲಾ ಶರೀಫ್ ಹಾಗೂ ಕೇರಳ ರಾಜ್ಯದ ಗಡಿನಾಡ ಸಾಹಿತ್ಯ ಅಕಾಡೆಮಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕಾಪುವಿನ ಸಮಾಜ ಸೇವಕ ದಿವಾಕರ ಬಿ. ಶೆಟ್ಟಿ ಕಳತ್ತೂರು ಇವರನ್ನು ಗಣ್ಯರು, ಅಭಿಮಾನಿಗಳು ಸನ್ಮಾನಿಸಿದರು.

ಈ ಸಂದರ್ಭ ಪರ್ಕಳ ಬಳಕೆದಾರರ ವೇದಿಕೆಯ ಸ್ಥಾಪಕರಾದ ಅಬೂಬಕ್ಕರ್ ಹಾಜಿ ಪರ್ಕಳ, ವಿಶ್ವನಾಥ ಪೂಜಾರಿ ಗರಡಿಮನೆ, ಶೇಖರ್ ಬಿ. ಶೆಟ್ಟಿ ಕಳತ್ತೂರು, ಅರುಣಾಕರ ಶೆಟ್ಟಿ ಕಳತ್ತೂರು, ಚಂದ್ರನಗರ ಕ್ರೆಸೆಂಟ್ ಇಂಟನ್ರ್ಯಾಷನಲ್ ಸ್ಕೂಲ್‍ನ ಸ್ಥಾಪಕ ಅಧ್ಯಕ್ಷ ಸಂಶುದ್ದೀನ್ ಯೂಸುಫ್, ಕೆಪಿಸಿಸಿ ಎನ್‍ಆರ್‍ಐ ವಿಂಗ್ ಅಧ್ಯಕ್ಷ ಶೇಖ್ ವಾಹಿದ್ ದಾವೂದ್, ಉಮ್ಮರಬ್ಬ ಚಂದ್ರನಗರ, ಕ್ರೆಸೆಂಟ್ ಇಂಟರ್‍ನ್ಯಾಷನಲ್ ಸ್ಕೂಲ್‍ನ ಪ್ರಾಂಶುಪಾಲ ನವಾಬ್ ಉಪಸ್ಥಿತರಿದ್ದರು.

ಅಭಿನಂದನಾ ಸಮಿತಿ ಪ್ರಧಾನ ಸಂಚಾಲಕ ದಿವಾಕರ್ ಡಿ.ಶೆಟ್ಟಿ ಸ್ವಾಗತಿಸಿದರು. ದಿನೇಶ್ ಆಚಾರ್ಯ ಶಿರ್ವ ಅಭಿನಂದನಾ ಪತ್ರ ವಾಚಿಸಿದರು. ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago