ಕಾಪು: ರಾಷ್ಟ್ರೀ ಹೆದ್ದಾರಿ 66ರ ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಆರು ಮಂದಿಯ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಪೊಲೀಸ್ ಠಾಣೆಯ ಎಎಸ್ಐ ರವೀಶ್ ಹೊಳ್ಳ ಸಿಬ್ಬಂದಿಗಳ ಜತೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ರವಿವಾರ ಸಂಜೆ 6.30 ಗಂಟೆಯ ವೇಳೆ ಸಾರ್ವಜನಿಕ ಸ್ಥಳದಲ್ಲಿ 6 ಜನ ಪುರುಷರು ಸೇರಿಕೊಂಡು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈ-ಕೈ ಮಿಲಾಯಿಸಿಕೊಂಡು ಹೊಡೆದಾಡುತ್ತಿರುವುದನ್ನು ಗಮನಿಸಿದ್ದರು.
ಕೂಡಲೇ ಸ್ಥಳಕ್ಕೆ ಹೋಗಿ ಜಗಳವನ್ನು ತಡೆಯಲು ಮುಂದಾಗಿದ್ದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದು ಈ ವೇಳೆ 6 ಜನರಲ್ಲಿ 4 ಜನರು ಓಡಿ ಹೋಗಿದ್ದರು. ಉಳಿದ ಇಬ್ಬರನ್ನು ವಿಚಾರಿಸಲಾಗಿದ್ದು ಅವರು ಸ್ಥಳೀಯ ಬಾರ್ವೊಂದರಲ್ಲಿ ಕುಡಿದು ಯಾವುದೋ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆಸಿ ಪರಸ್ಪರ ಜಗಳ ಮಾಡುತ್ತಿದ್ದುದಾಗಿ ತಿಳಿಸಿದ್ದರು.
ಅದರಂತೆ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವಂತೆ ಹೊಡೆದಾಡಿಕೊಳ್ಳುತ್ತಿದ್ದ ಹಂಜಾ ಶೇಖ್, ತುಫೇಲ್ ಹಾಗೂ ಸ್ಥಳದಿಂದ ಓಡಿ ಹೋಗಿರುವ ಮಸಾಬ್ ಉಚ್ಚಿಲ, ನಮೀತ್ ಉಚ್ಚಿಲ, ಸುಜಿತ್ ಉಚ್ಛಿಲ, ಕೃಷ್ಣರಾಜ ಕರ್ಕೇರ ಮೂಳೂರು ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…