ಕಾಪು: ರಾಷ್ಟ್ರೀ ಹೆದ್ದಾರಿ 66ರ ಮೂಳೂರಿನ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಆರು ಮಂದಿಯ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಪೊಲೀಸ್ ಠಾಣೆಯ ಎಎಸ್ಐ ರವೀಶ್ ಹೊಳ್ಳ ಸಿಬ್ಬಂದಿಗಳ ಜತೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ರವಿವಾರ ಸಂಜೆ 6.30 ಗಂಟೆಯ ವೇಳೆ ಸಾರ್ವಜನಿಕ ಸ್ಥಳದಲ್ಲಿ 6 ಜನ ಪುರುಷರು ಸೇರಿಕೊಂಡು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈ-ಕೈ ಮಿಲಾಯಿಸಿಕೊಂಡು ಹೊಡೆದಾಡುತ್ತಿರುವುದನ್ನು ಗಮನಿಸಿದ್ದರು.
ಕೂಡಲೇ ಸ್ಥಳಕ್ಕೆ ಹೋಗಿ ಜಗಳವನ್ನು ತಡೆಯಲು ಮುಂದಾಗಿದ್ದು ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದು ಈ ವೇಳೆ 6 ಜನರಲ್ಲಿ 4 ಜನರು ಓಡಿ ಹೋಗಿದ್ದರು. ಉಳಿದ ಇಬ್ಬರನ್ನು ವಿಚಾರಿಸಲಾಗಿದ್ದು ಅವರು ಸ್ಥಳೀಯ ಬಾರ್ವೊಂದರಲ್ಲಿ ಕುಡಿದು ಯಾವುದೋ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆಸಿ ಪರಸ್ಪರ ಜಗಳ ಮಾಡುತ್ತಿದ್ದುದಾಗಿ ತಿಳಿಸಿದ್ದರು.
ಅದರಂತೆ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವಂತೆ ಹೊಡೆದಾಡಿಕೊಳ್ಳುತ್ತಿದ್ದ ಹಂಜಾ ಶೇಖ್, ತುಫೇಲ್ ಹಾಗೂ ಸ್ಥಳದಿಂದ ಓಡಿ ಹೋಗಿರುವ ಮಸಾಬ್ ಉಚ್ಚಿಲ, ನಮೀತ್ ಉಚ್ಚಿಲ, ಸುಜಿತ್ ಉಚ್ಛಿಲ, ಕೃಷ್ಣರಾಜ ಕರ್ಕೇರ ಮೂಳೂರು ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…