ಕಾಪು ಸುಗ್ಗಿ ಮಾರಿಪೂಜೆ- ಬಾರ್ ಬಂದ್ ಆದೇಶ ವಾಪಸ್ಸು- ಎಂದಿನಂತೆ ಬಾರ್- ರೆಸ್ಟೋರೆಂಟ್ ಓಪನ್ – vishwanews24
ಕಾಪು: ಕಾಪು ತಾಲೂಕಿನ ಕಾಪುವಿನ ಮಾರಿ ಗುಡಿಗಳಲ್ಲಿ ಸುಗ್ಗಿ ಮಾಡಿ ಪೂಜೆಯು ನಡೆಯುವ ಸಂದರ್ಭದಲ್ಲಿ ಕಾನೂನು
ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಟ್ಗಳ ಮದ್ಯ ಮಾರಾಟವನ್ನು ದಿನಾಂಕ:23/03/2021 ರ ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ:24/03/2021 ರಂದು ರಾತ್ರಿ 12.00 ಗಂಟೆಯವರೆಗೆ ನಿಷೇಧಿಸಿ ಅಧಿಸೂಚನೆಯನ್ನು ಹೊರಡಿಸಿಲಾಗಿರುತ್ತದೆ.
ಉಲ್ಲೇಖ(2) ರ ಪೊಲೀಸ್ ಅಧೀಕ್ಷಕರ ಪತ್ರದಲ್ಲಿ ದಿನಾಂಕ: 22-03-2021 ರಂದು ಕಾಪು ಠಾಣ ವ್ಯಾಪ್ತಿಯ ಪಡು, ಮೂಳೂರು, ಮಜೂರು ಗ್ರಾಮ ವ್ಯಾಪ್ತಿಯಲ್ಲಿರುವ ಮದ್ಯ ಮಾರಾಟ ಅಂಗಡಿ (ವೈನ್ ಶಾಪ್, ಬಾರ್ ಎಂಡ್ ರೆಸ್ಟೋರೆಂಟ್) ಗಳ ಮಾಲಿಕರು ಠಾಣೆಗೆ ಹಾಜರಾಗಿ ಈತನಕ ಸುಗ್ಗಿ ಮಾರಿ ಪೂಜೆ ದಿನದಂದು (ಎರಡು ದಿನ) ಯಾವುದೇ ರೀತಿಯ ಕಾನೂನು ಇವತ್ತಿಗೆ ಹಾಗೂ ಸಾರ್ವಜನಿಕ ಶಾಂತಿ ಭಂಗ ಪ್ರಕರಣಗಳು ದಾಖಲಾಗಿರುವುದಿಲ್ಲ ಅಲ್ಲದೇ ಸುಗ್ಗಿ ಮಾಡಿ ಪೂಜೆ ದಿನದಂದು ಈ ತನಕ ಮಧ್ಯ ಮಾರಾಟ ನಿಷೇದವಾಗಿರುವುದಿಲ್ಲ, ಅಲ್ಲದೇ ಕಳೆದೊಂದು ವರ್ಷದಿಂದ ಕೊರೊನಾ ಮಹಾಮಾರಿಯಿಂದ ಸನದುದಾರರಿಗೆ ಅರ್ಥಿಕವಾಗಿ ತುಂಬಲಾರದ ನಷ್ಟ ಉಂಟಾಗಿರುವುದರಿಂದ ದಿನಾಂಕ: 23-03-240721 ಮತ್ತು ದಿನಾಂಕ: 24-03-2021 ರಂದು ಯಥಾಸ್ಥಿತಿಯಲ್ಲಿ ಮಧ್ಯ ಮಾರಾಟ ಮಾಡಲು ಅನುಮಾಡಿ ಕೊಡಬೇಕೆಂದು ಕೊಡಿ ಮನವಿ ಪತ್ರ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲಿಸಲಾಗಿ ಸುಗ್ಗಿ ಮಾರಿ ಪೂಜೆ ದಿನದಂದು ಯಾವುದೇ ಕಾನೂನು ವ್ಯವಸ್ಥೆಗೆ ಹಾಗೂ ಸಾರ್ವಜನಿಕ ಶಾಂತಿ ಭಂಗ ಪ್ರಕರಣಗಳು ದಾಖಲಾಗದೆ ಇರುವುದರಿಂದ ವೈನ್ ಶಾಪ್ ,ಬಾರ್ ಎಂಡ್ ರೆಸ್ಟೋರೆಂಟ್ ಗಳ ಮಾಲಿಕರು “ ಡ್ರೈ ಡೇ” ಆದೇಶದಲ್ಲಿ ಸಡಿಲಿಕೆ ಮಾಡುವಂತೆ ಕೋರಿರುವ ಹಿನ್ನೆಲೆಯಲ್ಲಿ ದಿನಾಂಕ 23/03/2021ಬೆಳಗ್ಗೆ 6 ಗಂಟೆಯಿಂದ ದಿನಾಂಕ 24/3/2021 ರ ರಾತ್ರಿ 12.00 ಗಂಟೆಯವರೆಗೆ ಪೊಲೀಸ್ ಠಾಣಾ ಸರಹದ್ದಿನ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]