ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ಸಂಜೆ ಎರಡು ದೇವಸ್ಥಾನದಲ್ಲಿ ಕಾಲಾವಧಿ ‘ಸುಗ್ಗಿ ಮಾರಿಪೂಜೆ, ಬುಧವಾರ ಸಮಾಪನಗೊಂಡಿದ್ದು, ದಿನಗಳಲ್ಲಿ ಸುಮಾರು 30 ಕೋ.ರೂ. ಗಳಿಗೂ ಮಿಕ್ಕ ಆರ್ಥಿಕ ವಹಿವಾಟು ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕಾಪು ಸುಗ್ಗಿ ಮಾರಿಪೂಜೆಯಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಮಾತ್ರವಲ್ಲದೆ ಶಿವಮೊಗ್ಗ ಚಿಕ್ಕಮಗಳೂರು, ಉತ್ತರ ಕನ್ನಡ, ಕಾಸರಗೋಡು, ಮಹಾರಾಷ್ಟ್ರ ಮತ್ತು ಬೆಂಗಳೂರು ಸೇರಿದಂತೆ ಲಕ್ಷಾಂತರ ವಿವಿಧೆಡೆಗಳಿಂದ ಭಕ್ತರು ದೇವಿಯ ದರ್ಶನ ಪಡೆದು ವಿವಿಧ ಹರಕೆ – ಸೇವೆಗಳನ್ನು ಸಮರ್ಪಿಸಿದ್ದಾರೆ.
ನೂರಾರು ಸಂತೆ ಅಂಗಡಿಗಳು, ಮಳಿಗೆಗಳು ತೆರೆದಿದ್ದು ಭರ್ಜರಿ ವ್ಯಾಪಾರ ನಡೆದಿದೆ. ಮಂಗಳವಾರ ರಾತ್ರಿಯಿಂದ ಬುಧವಾರ ಸಂಜೆಯವರೆಗೆ ವಿವಿಧ ಹರಕೆ ಸೇವೆಗಳ ಮೂಲಕ 30 ಕೋ.ರೂ. ವರೆಗಿನ ಆರ್ಥಿಕ ವಹಿವಾಟು ನಡೆದಿದೆ ಎಂದು ತಿಳಿದು ಬಂದಿದೆ.
50 ಸಾವಿರಕ್ಕೂ ಗದ್ದಿಗೆ ಪೂಜೆ ಸೇವೆ
ಮೂರೂ ಮಾರಿಗುಡಿಗಳಲ್ಲಿ ಗದ್ದುಗೆ ಪೂಜೆ ವಿಶೇಷ ಸೇವೆಯಾಗಿದ್ದು, ಭಕ್ತರು ಸುಮಾರು 50 ಸಾವಿರಕ್ಕೂ ಅಧಿಕ ಗದ್ದುಗೆ ಪೂಜೆ ಸೇವೆಯನ್ನು ದೇವಿಗೆ ಸಮರ್ಪಿಸಿದ್ದಾರೆ.
ಸುಮಾರು 15 ಸಾವಿರಕ್ಕೂ ಅಧಿಕಸಾವಿರಕ್ಕೂ ಅಧಿಕ ಹೂವಿನ ಪೂಜೆ ಕುಂಕುಮಾರ್ಚನೆ ಸೇವೆ ಮತ್ತು 8 ಸೇವೆಗಳು ಸಮರ್ಪಣೆಗೊಂಡಿವೆ.
ಮೂರೂ ಮಾರಿಗುಡಿಗಳಲ್ಲಿ ಸ್ವಯಂ ಸೇವಕರ ಸೇವೆಯಿಂದ ಭಕ್ತರು ತೊಂದರೆಯಿಲ್ಲದೆ ದೇವರ ದರ್ಶನ ಪಡೆದರು. ವಿವಿಧೆಡೆ ಸಿಸಿ ಕೆಮರಾ ಕಣ್ಣಾವಲು, ಟ್ರಾಫಿಕ್ ಮತ್ತು ಜನಸಂದಣಿಯ ನಿಯಂತ್ರಣಕ್ಕಾಗಿ ಚೆಕ್ ಪೋಸ್ಟ್ಗಳನ್ನು ಅಳವಡಿಸಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪುರಸಭೆ ಅಧಿಕಾರಿಗಳು, ಸಿಬಂದಿ ಮತ್ತು ಪೌರಕಾರ್ಮಿಕರು ಸ್ವಚ್ಛತೆಗಾಗಿ ನಿರಂತರವಾಗಿ ಶ್ರಮಿಸಿದ್ದು ಸಾರ್ವಜನಿಕರಿಂದ ಮತ್ತು ವ್ಯಾಪಾರಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…