ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ಸಂಜೆ ಎರಡು ದೇವಸ್ಥಾನದಲ್ಲಿ ಕಾಲಾವಧಿ ‘ಸುಗ್ಗಿ ಮಾರಿಪೂಜೆ, ಬುಧವಾರ ಸಮಾಪನಗೊಂಡಿದ್ದು, ದಿನಗಳಲ್ಲಿ ಸುಮಾರು 30 ಕೋ.ರೂ. ಗಳಿಗೂ ಮಿಕ್ಕ ಆರ್ಥಿಕ ವಹಿವಾಟು ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕಾಪು ಸುಗ್ಗಿ ಮಾರಿಪೂಜೆಯಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಮಾತ್ರವಲ್ಲದೆ ಶಿವಮೊಗ್ಗ ಚಿಕ್ಕಮಗಳೂರು, ಉತ್ತರ ಕನ್ನಡ, ಕಾಸರಗೋಡು, ಮಹಾರಾಷ್ಟ್ರ ಮತ್ತು ಬೆಂಗಳೂರು ಸೇರಿದಂತೆ ಲಕ್ಷಾಂತರ ವಿವಿಧೆಡೆಗಳಿಂದ ಭಕ್ತರು ದೇವಿಯ ದರ್ಶನ ಪಡೆದು ವಿವಿಧ ಹರಕೆ – ಸೇವೆಗಳನ್ನು ಸಮರ್ಪಿಸಿದ್ದಾರೆ.
ನೂರಾರು ಸಂತೆ ಅಂಗಡಿಗಳು, ಮಳಿಗೆಗಳು ತೆರೆದಿದ್ದು ಭರ್ಜರಿ ವ್ಯಾಪಾರ ನಡೆದಿದೆ. ಮಂಗಳವಾರ ರಾತ್ರಿಯಿಂದ ಬುಧವಾರ ಸಂಜೆಯವರೆಗೆ ವಿವಿಧ ಹರಕೆ ಸೇವೆಗಳ ಮೂಲಕ 30 ಕೋ.ರೂ. ವರೆಗಿನ ಆರ್ಥಿಕ ವಹಿವಾಟು ನಡೆದಿದೆ ಎಂದು ತಿಳಿದು ಬಂದಿದೆ.
50 ಸಾವಿರಕ್ಕೂ ಗದ್ದಿಗೆ ಪೂಜೆ ಸೇವೆ
ಮೂರೂ ಮಾರಿಗುಡಿಗಳಲ್ಲಿ ಗದ್ದುಗೆ ಪೂಜೆ ವಿಶೇಷ ಸೇವೆಯಾಗಿದ್ದು, ಭಕ್ತರು ಸುಮಾರು 50 ಸಾವಿರಕ್ಕೂ ಅಧಿಕ ಗದ್ದುಗೆ ಪೂಜೆ ಸೇವೆಯನ್ನು ದೇವಿಗೆ ಸಮರ್ಪಿಸಿದ್ದಾರೆ.
ಸುಮಾರು 15 ಸಾವಿರಕ್ಕೂ ಅಧಿಕಸಾವಿರಕ್ಕೂ ಅಧಿಕ ಹೂವಿನ ಪೂಜೆ ಕುಂಕುಮಾರ್ಚನೆ ಸೇವೆ ಮತ್ತು 8 ಸೇವೆಗಳು ಸಮರ್ಪಣೆಗೊಂಡಿವೆ.
ಮೂರೂ ಮಾರಿಗುಡಿಗಳಲ್ಲಿ ಸ್ವಯಂ ಸೇವಕರ ಸೇವೆಯಿಂದ ಭಕ್ತರು ತೊಂದರೆಯಿಲ್ಲದೆ ದೇವರ ದರ್ಶನ ಪಡೆದರು. ವಿವಿಧೆಡೆ ಸಿಸಿ ಕೆಮರಾ ಕಣ್ಣಾವಲು, ಟ್ರಾಫಿಕ್ ಮತ್ತು ಜನಸಂದಣಿಯ ನಿಯಂತ್ರಣಕ್ಕಾಗಿ ಚೆಕ್ ಪೋಸ್ಟ್ಗಳನ್ನು ಅಳವಡಿಸಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪುರಸಭೆ ಅಧಿಕಾರಿಗಳು, ಸಿಬಂದಿ ಮತ್ತು ಪೌರಕಾರ್ಮಿಕರು ಸ್ವಚ್ಛತೆಗಾಗಿ ನಿರಂತರವಾಗಿ ಶ್ರಮಿಸಿದ್ದು ಸಾರ್ವಜನಿಕರಿಂದ ಮತ್ತು ವ್ಯಾಪಾರಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…