ಕಾಪು: ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲು ವಿಳಂಬ ನೀತಿ ಅನುಸರಿಸುವಿಕೆ, ಭವಿಷ್ಯದಲ್ಲಿ ಸರತ್ಕಲ್ ಟೋಲ್ನ್ನು ಹೆಜಮಾಡಿ ಟೋಲ್ಗೇಟ್ನ ಜೊತೆಗೆ ವಿಲೀನಗೊಳಿಸಿ ದರ ಏರಿಸುವ ಸಾಧ್ಯತೆಯನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನ.12ರಂದು ಬೆಳಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಕಾಪು ಪೇಟೆಯಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ.
ಸುರತ್ಕಲ್ನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಈಗಾಗಲೇ ಪ್ರತಿಭಟನೆ ನಡೆಸಲಾಗಿದ್ದು ಸರಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಟೋಲ್ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರೂ ಇನ್ನೂ ತೆರವಾಗಿಲ್ಲ. ಮುಂದೆ ಸುರತ್ಕಲ್ ಟೋಲ್ ಹೆಜಮಾಡಿ ಟೋಲ್ ಜತೆ ವಿಲೀನ ಗೊಂಡರೆ ಅದರಿಂದ ವಾಹನ ಸವಾರರಿಗೆ ತೀವ್ರ ಬರೆ ಬೀಳಲಿದೆ. ಹೆಜಮಾಡಿ ಟೋಲ್ನ ಸುತ್ತಮುತ್ತಲಿನ ವ್ಯಾಪ್ತಿಗೆ ಬರುವ 5-7 ಕಿ.ಮೀ. ವ್ಯಾಪ್ತಿಯ ಜನರಿಗೆ ಉಚಿತ ಪಾಸ್ ನೀಡುವ ಬಗ್ಗೆ ನೀಡಿರುವ ಮನವಿಗೂ ಯಾವುದೇ ಪುರಸ್ಕಾರ ದೊರಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಪ್ರತಿಭಟನಾ ಧರಣೆ ನಡೆಸಲು ಉದ್ದೇಶಿಸಿದೆ.
ಸಾರ್ವಜನಿಕರು ಮತ್ತು ವಾಹನ ಸವಾರರ ಪರವಾಗಿ ನಡೆಯುವ ಪ್ರತಿಭಟನಾ ಸಭೆಯಲ್ಲಿ ಕಾಪು ಕ್ಷೇತ್ರದ ನಾಗರಿಕರು, ಪಕ್ಷದ ಪದಾಽಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಸುವರ್ಣ ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…