Featured

ಕಾಪು  : ಸೆ.7ರಂದು ಕೊಪ್ಪಲಂಗಡಿಯಲ್ಲಿ ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ ಉದ್ಘಾಟನೆ – vishwanews24

ಕಾಪು  : ಸೆ.7 ರಂದು ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ ಉದ್ಘಾಟನೆ

ಉಡುಪಿ : ಕಾಪು ಕೊಪ್ಪಲಂಗಡಿಯ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲೇ ನೂತನವಾಗಿ ನಿರ್ಮಾಣಗೊಂಡಿರುವ ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳಿಂದ ಕೂಡಿದ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ’ ಸೆ.7 ರಂದು ಬೆಳಗ್ಗೆ 11.30ಕ್ಕೆ ಉದ್ಘಾಟನೆಗೊಳ್ಳಲಿದೆ.

ಈ ಸಭಾಂಗಣದ ಮುಖ್ಯ ಹಾಲ್‌ನಲ್ಲಿ 1,500 ಮಂದಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ಇನ್ನೂ 1,500 ಮಂದಿಗೆ ಮಹಿಳೆಯರಿಗಾಗಿ ಪ್ರತ್ಯೇಕ ಬಾಲ್ಕನಿ ವ್ಯವಸ್ಥೆ ಮಾಡಲಾಗಿದೆ. ಇದು ಈ ಸಭಾಂಗಣದ ವೈಶಿಷ್ಟ್ಯವಾಗಿದೆ. 4,000 ಚದರ ಅಡಿ ವಿಸ್ತೀರ್ಣದ ಭವ್ಯವಾದ ಪ್ರವೇಶ ದ್ವಾರ, ಆತ್ಮೀಯ ಕೂಟಗಳಿಗೆ ಅನುಕೂಲವಾಗುವ ರೀತಿಯ 300 ಮಂದಿಗೆ ಕುಳಿತುಕೊಳ್ಳಲು ಸಾಮರ್ಥ್ಯ ಇರುವ ಮಿನಿ ಹಾಲ್, ಚರ್ಚೆಗಳಿಗೆ ಅನುಕೂಲವಾದ ಕಾನ್ಸರೆನ್ಸ್ ರೂಂಗಳು ಕೂಡ ಇವೆ.

ಒಟ್ಟು 30,000 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಎರಡು ಭೋಜನ ಭವನಗಳು, ಪೂರ್ಣಸಜ್ಜಿತ ಅಡುಗೆ ಮನೆಗಳು, ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ ನಮಾಜ್ ಕೊಠಡಿಗಳು, ಹೈ-ಕ್ಯಾಪಾಸಿಟಿ ಲಿಫ್ಟ್‌ಗಳು ಹಾಗೂ 250 ವಾಹನಗಳಿಗೆ ಅನುಕೂಲವಾಗುವ ಪಾರ್ಕಿಂಗ್ ವ್ಯವಸ್ಥೆಗಳನ್ನು ಈ ಸಭಾಂಗಣ ಒಳಗೊಂಡಿದೆ.

ಈ ಸೌಲಭ್ಯಗಳು ಇಂದಿನ ಅಗತ್ಯಗಳನ್ನು ಮಾತ್ರವಲ್ಲ, ಮುಂದಿನ ತಲೆಮಾರುಗಳಿಗೂ ಸೇವೆ ಮಾಡಲು ನಿರ್ಮಿಸ ಲಾಗಿದೆ. ಮುಂದೆ ಇನ್ನಷ್ಟು ಸೌಲಭ್ಯಗಳನ್ನು – ಮುಕ್ತಾಂಗಣ, ಈಜುಕೊಳ ಮತ್ತು ವಸತಿ ಕೊಠಡಿ ವ್ಯವಸ್ಥೆ ಅಭಿವೃದ್ಧಿ ಪಡಿಸುವ ಯೋಜನೆ ಕೂಡ ಇದೆ ಎಂದು ಇನಾಸನ್ ಆಡಿಟೋರಿಯಂ ಅಧ್ಯಕ್ಷ ಮುಹಮ್ಮದ್ ಸಾದಿಕ್ ತಿಳಿಸಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡರಾದ ಅಸ್ಲಂ ಕಾಜಿ, ಅಬ್ದುಲ್ ಜಲೀಲ್, ಮುಸ್ತಫಾ ಅಸಾದಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ಆಸಿಫ್ ಕೋಟೇಶ್ವರ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಭಾಗವಹಿಸಲಿರು ವರು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಶುಭ ಹಾರೈಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

10 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

10 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

11 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

11 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

11 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

11 hours ago