Featured

ಕಾಪು  : ಸೆ.7ರಂದು ಕೊಪ್ಪಲಂಗಡಿಯಲ್ಲಿ ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ ಉದ್ಘಾಟನೆ – vishwanews24

ಕಾಪು  : ಸೆ.7 ರಂದು ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ ಉದ್ಘಾಟನೆ

ಉಡುಪಿ : ಕಾಪು ಕೊಪ್ಪಲಂಗಡಿಯ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲೇ ನೂತನವಾಗಿ ನಿರ್ಮಾಣಗೊಂಡಿರುವ ಸರ್ವಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳಿಂದ ಕೂಡಿದ ಭವ್ಯ ಸಭಾಂಗಣ ‘ಇನಾಸನ್ ಆಡಿಟೋರಿಯಂ’ ಸೆ.7 ರಂದು ಬೆಳಗ್ಗೆ 11.30ಕ್ಕೆ ಉದ್ಘಾಟನೆಗೊಳ್ಳಲಿದೆ.

ಈ ಸಭಾಂಗಣದ ಮುಖ್ಯ ಹಾಲ್‌ನಲ್ಲಿ 1,500 ಮಂದಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ಇನ್ನೂ 1,500 ಮಂದಿಗೆ ಮಹಿಳೆಯರಿಗಾಗಿ ಪ್ರತ್ಯೇಕ ಬಾಲ್ಕನಿ ವ್ಯವಸ್ಥೆ ಮಾಡಲಾಗಿದೆ. ಇದು ಈ ಸಭಾಂಗಣದ ವೈಶಿಷ್ಟ್ಯವಾಗಿದೆ. 4,000 ಚದರ ಅಡಿ ವಿಸ್ತೀರ್ಣದ ಭವ್ಯವಾದ ಪ್ರವೇಶ ದ್ವಾರ, ಆತ್ಮೀಯ ಕೂಟಗಳಿಗೆ ಅನುಕೂಲವಾಗುವ ರೀತಿಯ 300 ಮಂದಿಗೆ ಕುಳಿತುಕೊಳ್ಳಲು ಸಾಮರ್ಥ್ಯ ಇರುವ ಮಿನಿ ಹಾಲ್, ಚರ್ಚೆಗಳಿಗೆ ಅನುಕೂಲವಾದ ಕಾನ್ಸರೆನ್ಸ್ ರೂಂಗಳು ಕೂಡ ಇವೆ.

ಒಟ್ಟು 30,000 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಎರಡು ಭೋಜನ ಭವನಗಳು, ಪೂರ್ಣಸಜ್ಜಿತ ಅಡುಗೆ ಮನೆಗಳು, ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ ನಮಾಜ್ ಕೊಠಡಿಗಳು, ಹೈ-ಕ್ಯಾಪಾಸಿಟಿ ಲಿಫ್ಟ್‌ಗಳು ಹಾಗೂ 250 ವಾಹನಗಳಿಗೆ ಅನುಕೂಲವಾಗುವ ಪಾರ್ಕಿಂಗ್ ವ್ಯವಸ್ಥೆಗಳನ್ನು ಈ ಸಭಾಂಗಣ ಒಳಗೊಂಡಿದೆ.

ಈ ಸೌಲಭ್ಯಗಳು ಇಂದಿನ ಅಗತ್ಯಗಳನ್ನು ಮಾತ್ರವಲ್ಲ, ಮುಂದಿನ ತಲೆಮಾರುಗಳಿಗೂ ಸೇವೆ ಮಾಡಲು ನಿರ್ಮಿಸ ಲಾಗಿದೆ. ಮುಂದೆ ಇನ್ನಷ್ಟು ಸೌಲಭ್ಯಗಳನ್ನು – ಮುಕ್ತಾಂಗಣ, ಈಜುಕೊಳ ಮತ್ತು ವಸತಿ ಕೊಠಡಿ ವ್ಯವಸ್ಥೆ ಅಭಿವೃದ್ಧಿ ಪಡಿಸುವ ಯೋಜನೆ ಕೂಡ ಇದೆ ಎಂದು ಇನಾಸನ್ ಆಡಿಟೋರಿಯಂ ಅಧ್ಯಕ್ಷ ಮುಹಮ್ಮದ್ ಸಾದಿಕ್ ತಿಳಿಸಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡರಾದ ಅಸ್ಲಂ ಕಾಜಿ, ಅಬ್ದುಲ್ ಜಲೀಲ್, ಮುಸ್ತಫಾ ಅಸಾದಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ಆಸಿಫ್ ಕೋಟೇಶ್ವರ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಭಾಗವಹಿಸಲಿರು ವರು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಶುಭ ಹಾರೈಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago