ಕಾಪು : ಅಕ್ರಮವಾಗಿ ಗೋ ವಧೆ ನಡೆಸಿ ಮಾಂಸವನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಸೇನಬ್ಬ ಹಾಗೂ ಶಂಶುದ್ಧೀನ್ ಪೊಲೀಸರು ವಶಕ್ಕೆ ಪಡೆದುಕೊಂಡರು ಆರೋಪಿಗಳು.
ಮಲ್ಲಾರು ಗ್ರಾಮದ ಪಕೀರ್ಣ ಕಟ್ಟೆಯಿಂದ ಮೂಳೂರು ಕಡೆಗೆ ಅಕ್ರಮ ದನದ ಮಾಂಸ ಮಾರಾಟ ಮಾಡಲು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಇತರ ಸಿಬ್ಬಂದಿಗಳೊಂದಿಗೆ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ರೈಲ್ವೆ ಸೇತುವೆ ಬಳಿ ಹೋಗಿ ನಿಂತು ವಾಹನಗಳನ್ನು ಪರಿಶೀಲಿಸುತ್ತಿರುವಾಗ ಸ್ಕೂಟರ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳನ್ನು ತಡೆದು ಸ್ಕೂಟರ್ ನ್ನು ಪರಿಶೀಲಿಸಿದಾಗ ಸ್ಕೂಟರ್ ನಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ದನದ ಮಾಂಸ ಪತ್ತೆಯಾಗಿದೆ. ಮಾತ್ರವಲ್ಲದೆ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ, ಬೀದಿ ಬದಿಯಲ್ಲಿನ ದನವನ್ನು ಕಳವು ಮಾಡಿ, ಹಾಡಿಯಲ್ಲಿ ಮಾಂಸ ಮಾಡಿ ಮನೆ ಮನೆಗೆ ಮಾರಾಟ ಮಾಡುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…