ಕಾಪು: ಸ್ಕೂಟಿ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.
ಬೈಕ್ ಸವಾರ ಅದಮಾರು ಕಾಲೇಜ್ ಬಳಿಯ ನಿವಾಸಿ ಸೂರಜ್ (23) ಮೃತಪಟ್ಟು ಸಹಸವಾರ ಅಧೀಶ್ ಮತ್ತು ಸ್ಕೂಟಿ ಸವಾರ ಕೊಪ್ಪಲಂಗಡಿ ನಿವಾಸಿ ಉಮೇಶ್ ಗಾಯಗೊಂಡವರು.
ಮೃತ ಸೂರಜ್ ಪಡುಬಿದ್ರಿ ಸುಜ್ಞಾನ್ ಕಂಪೆನಿಯ ಸೂಪರ್ ವೈಸರ್ ಆಗಿದ್ದು ರಾತ್ರಿ ಕಟಪಾಡಿಗೆ ತೆರಳಿ, ಅಲ್ಲಿಂದ ಅದಮಾರಿನ ತನ್ನ ಮನೆಗೆ ಆಗಮಿಸುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಸ್ಕೂಟಿ ಸವಾರ ಉಮೇಶ್ ಮತ್ತು ಬೈಕ್ ಸವಾರ ಸೂರಜ್ ಗಂಭೀರ ಗಾಯಗೊಂಡಿದ್ದು, ಸಹಸವಾರ ಆದೀಶ್ ಸಣ್ಣ ಪುಟ್ಟ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುಗಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರ ಸೂಚನೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಸೂರಜ್ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದು ಅದರಂತೆ ವಾಪಸ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…