ಕಾಪು: ಸ್ಕೂಟಿ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.
ಬೈಕ್ ಸವಾರ ಅದಮಾರು ಕಾಲೇಜ್ ಬಳಿಯ ನಿವಾಸಿ ಸೂರಜ್ (23) ಮೃತಪಟ್ಟು ಸಹಸವಾರ ಅಧೀಶ್ ಮತ್ತು ಸ್ಕೂಟಿ ಸವಾರ ಕೊಪ್ಪಲಂಗಡಿ ನಿವಾಸಿ ಉಮೇಶ್ ಗಾಯಗೊಂಡವರು.
ಮೃತ ಸೂರಜ್ ಪಡುಬಿದ್ರಿ ಸುಜ್ಞಾನ್ ಕಂಪೆನಿಯ ಸೂಪರ್ ವೈಸರ್ ಆಗಿದ್ದು ರಾತ್ರಿ ಕಟಪಾಡಿಗೆ ತೆರಳಿ, ಅಲ್ಲಿಂದ ಅದಮಾರಿನ ತನ್ನ ಮನೆಗೆ ಆಗಮಿಸುತ್ತಿರುವಾಗ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಸ್ಕೂಟಿ ಸವಾರ ಉಮೇಶ್ ಮತ್ತು ಬೈಕ್ ಸವಾರ ಸೂರಜ್ ಗಂಭೀರ ಗಾಯಗೊಂಡಿದ್ದು, ಸಹಸವಾರ ಆದೀಶ್ ಸಣ್ಣ ಪುಟ್ಟ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುಗಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರ ಸೂಚನೆಯಂತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಸೂರಜ್ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದು, ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದ್ದು ಅದರಂತೆ ವಾಪಸ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…