ಕಾಪು : ಸ್ವಾತಂತ್ರ್ಯೋತ್ಸವ ಸಂಭ್ರಮ ಒಂದು ದಿನದ ಜಾತ್ರೆಗೆ ಸೀಮಿತವಾಗದೆ ಜೀವನದುದ್ದಕ್ಕೂ ದೇಶ ಪ್ರೇಮ ಬೆಳೆಸಿಕೊಳ್ಳಬೇಕು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24
ಕಾಪು : ಸ್ವಾತಂತ್ರ್ಯೋತ್ಸವ ಸಂಭ್ರಮ ಒಂದು ದಿನದ ಜಾತ್ರೆಗೆ ಸೀಮಿತವಾಗದೆ ಜೀವನದುದ್ದಕ್ಕೂ ದೇಶ ಪ್ರೇಮ ಬೆಳೆಸಿಕೊಳ್ಳಬೇಕು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು : ಭಾರತದ ಸ್ವಾತಂತ್ರಕ್ಕಾಗಿ ಹೋರಾಡಿದ ಪೂರ್ವಜರಲ್ಲಿದ್ದ ಸ್ವದೇಶಾಭಿಮಾನದ ಕಿಚ್ಚು ಹಾಗು ಶ್ರದ್ದೆಯ ಹೋರಾ ಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರಕಿದೆ. ಅದನ್ನು ಮುಂದಿನ ಪೀಳಿಗೆಗೂ ತಿಳಿಸಿಕೊಡುವ ಪ್ರಯತ್ನ ನಮ್ಮಿಂದ ನಡೆಯಬೇಕಿದೆ. ಇನ್ನು ಕೆಲವೇ ವರ್ಷದಲ್ಲಿ ಭಾರತ ವಿಕಸಿತಗೊಳ್ಳಲಿದೆ ಅದಕ್ಕಾಗಿ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ, ಆ ಪ್ರಯುಕ್ತ ನಾವೆಲ್ಲರೂ ದೇಶ ಸೇವೆಗಾಗಿ ಸನ್ನದ್ಧರಾಗಬೇಕು ಮತ್ತು ವಿಶೇಷವಾಗಿ ಮಹಿಳಾ ಸಬಲೀಕರಣವಾಗಬೇಕು ಎಂದು ಕಾಪು ತಹಸೀಲ್ದಾರ್ ಡಾ ಪ್ರತಿಭಾ ಆರ್ ಹೇಳಿದರು.
ಕಾಪು ತಾಲೂಕು ಮಟ್ಟದ ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ಹಾಗೂ ತಾಲೂಕು ಆಡಳಿತದ ವತಿಯಿಂದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದೇಶದ ಪ್ರಗತಿ ಮತ್ತು ಉನ್ನತಿಗೆ ನಾವೆಲ್ಲರೂ ನಮ್ಮಿಂದ ಸಾಧ್ಯವಾಗುವಷ್ಟು ರೀತಿಯಲ್ಲಿ ಸಹಕರಿಸುವಂತಾಗಬೇಕು. ಇದು ಸ್ವಾತಂತ್ರೋತ್ಸವಕ್ಕೆ ನೀಡುವ ಕೊಡುಗೆಯಾಗಲಿದೆ ಇದು ಕೇವಲ ಒಂದು ದಿನದ ಜಾತ್ರೆಗೆ ಸೀಮಿತವಾಗಬಾರದು ಎಂದರು.
78th Independence Day : ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ – vishwanews24
ಸಮ್ಮಾನ, ಗೌರವಾರ್ಪಣೆ : ಎಸ್ಎಸ್ಎಲ್ಸಿಯಲ್ಲಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಮ್ಮಾನಿಸಿ, ಗೌರವಿಸಲಾಯಿತು. ಪೊಲೀಸ್, ಗೃಹರಕ್ಷಕದಳ, ಸೇವಾದಳ, ಎನ್ ಸಿಸಿ ವಿದ್ಯಾರ್ಥಿಗಳಿಂದ ಧ್ವಜ ವಂದನೆ ನಡೆಯಿತು.
ಕಾಪು ಪುರಸಭೆ ಮುಖ್ಯಾಧಿಕಾರಿ ನಾಗರಾಜ., ಕಾಪು ಪೊಲೀಸ್ ವೃತ್ತ ನಿರೀಕ್ಷಕ ಜಯಶ್ರೀ ಮಾಣೆ, ತಾಲೂಕು ಯುವಜನ ಕ್ರೀಡಾ ಅಧಿಕಾರ ರೀತೆಶ್ ಸೂಡ,ತಾಲೂಕು ಪಂಚಾಯತ್ ಇ.ಓ ಜೇಮ್ಸ್ ಡಿಸಿಲ್ವಾ, , ಕಾಪು ಎಸ್ಸೆ ಅಬ್ದುಲ್ ಖಾದರ್,, ಕಾಪು ಪುರಸಭೆ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್, ನಾಗೇಶ್, ಶೈಲೇಶ್ ಅಮೀನ್, ಸತೀಶ್ ಚಂದ್ರ ಮೂಳೂರು, ಶಾಂತಲತ ಶೆಟ್ಟಿ, ಶೋಭ ಬಂಗೇರ,ಫರ್ಜಾನ,ಜ್ಯೂಲಿಯೇಟ್ಉಮೇಶ್ ಕರ್ಕೇರಾ, ಅಮೀರ್ ಮಹಮ್ಮದ್, ಸರಿತಾ,ಹರಿಣಾಕ್ಷಿ,ಮಹಮ್ಮದ್ ಆಸೀಫ್ ಇದ್ದರು.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಎಂ. ಗಾಂವ್ಕರ್ ಸ್ವಾಗತಿಸಿದರು, ಉಪನ್ಯಾಸಕಿ ಸುಚಿತ್ರಾ ಕಾರ್ಯಕ್ರಮ ನಿರೂಪಿಸಿದರು.

