ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಮುಂಬಯಿಯ ಭಜಕರಾದ ಸುನೀತಾ ಎಸ್. ಕಾಮತ್ ದೇಣಿಗೆಯೊಂದಿಗೆ
ಮತ್ತು ಇತರ ಭಕ್ತರ ಕಾಲಾವಧಿ ಸುಗ್ಗಿ ಮಾರಿಪೂಜೆಯಂದು ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಶ್ರೀ ದೇವಿಯ ಸಿಂಹವಾಹನಕ್ಕೆ ಸ್ವರ್ಣ ಮುಖ ಸಮರ್ಪಣೆಗೊಳ್ಳಲಿದೆ.
ಮಾ. 21ರಂದು ಸಂಜೆ 6.30ಕ್ಕೆ ಸ್ವರ್ಣ ಮುಖ ಸಿಂಹವಾಹನದ ಪುರಪ್ರವೇಶ ಶೋಭಾ ಯಾತ್ರೆ ನಡೆಯಲಿದ್ದು, ಕಾಪು ವೀರಭದ್ರ
ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡು ಶ್ರೀ ಕೊಂಕಣಿ ಮಠ ವೆಂಕಟರಮಣ ದೇವಸ್ಥಾನದವರೆಗೆ ಮೆರವಣಿಗೆ ಸಾಗಲಿದೆ. ಬಳಿಕ ಸುಗ್ಗಿ ಮಾರಿ
ಪೂಜೆ ಪ್ರಯುಕ್ತ ಶ್ರೀ ವೆಂಕಟರಮಣ ದೇವಸ್ಥಾನದಿಂದ ಹಳೇ ಮಾರಿಯಮ್ಮ ದೇವಸ್ಥಾನದ ವರೆಗೆ ದೇವಿಯ ರಜತ ರಥೋತ್ಸವ ನಡೆಯಲಿದೆ.
ಶೋಭಾಯಾತ್ರೆಯಲ್ಲಿ ಶಿರಸಿಯ ಐತಿಹಾಸಿಕ ಬೇಡರ ವೇಷ ತಂಡ, ಚಿತ್ರಕಲಾ ಆರ್ಟ್ಸ್ ತಂಡದ ಸಿಂಹ ನಡಿಗೆ, ಕೇರಳ ಶೈಲಿಯ ಚೆಂಡೆ, ಕೊಂಬು, ವಾದ್ಯ ತಂಡಗಳ ಸಹಿತ ವಿವಿಧ ಟ್ಯಾಬ್ ಮತ್ತು ಆಕರ್ಷಕ ನೃತ್ಯ ತಂಡಗಳು ಪಾಲ್ಗೊಳ್ಳಲಿವೆ ಎಂದು ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತಸರ
ಪ್ರಸಾದ್ ಗೋಕುಲ್ದಾಸ್ ಶೆಣೈ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…