ಕಾಪು: ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಮುಂಬಯಿಯ ಭಜಕರಾದ ಸುನೀತಾ ಎಸ್. ಕಾಮತ್ ದೇಣಿಗೆಯೊಂದಿಗೆ
ಮತ್ತು ಇತರ ಭಕ್ತರ ಕಾಲಾವಧಿ ಸುಗ್ಗಿ ಮಾರಿಪೂಜೆಯಂದು ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಶ್ರೀ ದೇವಿಯ ಸಿಂಹವಾಹನಕ್ಕೆ ಸ್ವರ್ಣ ಮುಖ ಸಮರ್ಪಣೆಗೊಳ್ಳಲಿದೆ.
ಮಾ. 21ರಂದು ಸಂಜೆ 6.30ಕ್ಕೆ ಸ್ವರ್ಣ ಮುಖ ಸಿಂಹವಾಹನದ ಪುರಪ್ರವೇಶ ಶೋಭಾ ಯಾತ್ರೆ ನಡೆಯಲಿದ್ದು, ಕಾಪು ವೀರಭದ್ರ
ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡು ಶ್ರೀ ಕೊಂಕಣಿ ಮಠ ವೆಂಕಟರಮಣ ದೇವಸ್ಥಾನದವರೆಗೆ ಮೆರವಣಿಗೆ ಸಾಗಲಿದೆ. ಬಳಿಕ ಸುಗ್ಗಿ ಮಾರಿ
ಪೂಜೆ ಪ್ರಯುಕ್ತ ಶ್ರೀ ವೆಂಕಟರಮಣ ದೇವಸ್ಥಾನದಿಂದ ಹಳೇ ಮಾರಿಯಮ್ಮ ದೇವಸ್ಥಾನದ ವರೆಗೆ ದೇವಿಯ ರಜತ ರಥೋತ್ಸವ ನಡೆಯಲಿದೆ.
ಶೋಭಾಯಾತ್ರೆಯಲ್ಲಿ ಶಿರಸಿಯ ಐತಿಹಾಸಿಕ ಬೇಡರ ವೇಷ ತಂಡ, ಚಿತ್ರಕಲಾ ಆರ್ಟ್ಸ್ ತಂಡದ ಸಿಂಹ ನಡಿಗೆ, ಕೇರಳ ಶೈಲಿಯ ಚೆಂಡೆ, ಕೊಂಬು, ವಾದ್ಯ ತಂಡಗಳ ಸಹಿತ ವಿವಿಧ ಟ್ಯಾಬ್ ಮತ್ತು ಆಕರ್ಷಕ ನೃತ್ಯ ತಂಡಗಳು ಪಾಲ್ಗೊಳ್ಳಲಿವೆ ಎಂದು ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತಸರ
ಪ್ರಸಾದ್ ಗೋಕುಲ್ದಾಸ್ ಶೆಣೈ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…
ಉಡುಪಿ: ಬ್ಯಾಡ್ಮಿಂಟನ್ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…