ಕಾಪು : ಇಲ್ಲಿನ ಹೆಜಮಾಡಿ ಬಂದರು ಅಭಿವೃದ್ಧಿಗೆ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ರೂ. 181 ಕೋಟಿ ಹಾಗೂ ಭೂ ಸ್ವಾಧೀನಕ್ಕೆ 7 ಕೋಟಿ ಸೇರಿದಂತೆ ಒಟ್ಟು 188 ಕೋಟಿ ರೂಪಾಯಿ ಅನುದಾನ ಮಂಜೂರಾಗಿ 60 ಶೇಖಡಾ ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಬಾಕಿ ಇರುವ ಅನುದಾನದ ಬಿಡುಗಡೆಯ ಬಗ್ಗೆ ಮೀನುಗಾರಿಕಾ ಸಚಿವರಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭ ಲಾಲಾಜಿ ಆರ್ ಮೆಂಡನ್, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ, ಉಪಾಧ್ಯಕ್ಷ ಪವಿತ್ರ ಗಿರೀಶ್, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಶರಣ್ ಮಟ್ಟು, ಜಗನ್ನಾಥ್, ನಳಿನಿ, ಸುಜಾತ, ಬಬಿತಾ, ಹೆಜಮಾಡಿ ಮೀನುಗಾರಿಕಾ ಬಂದರು ಸಮಿತಿಯ ಅಧ್ಯಕ್ಷ ಸದಾಶಿವ ಕೋಟ್ಯಾನ್, ಉಪಾಧ್ಯಕ್ಷ ರವಿ ಕುಂದರ್, ಪ್ರಧಾನ ಕಾರ್ಯದರ್ಶಿ ವಿಜಯ ಬಂಗೇರ, ಮೀನುಗಾರ ಮುಖಂಡರಾದ ಹರೀಶ್ ಚಂದ್ರ ಮೆಂಡನ್, ನಾರಾಯಣ ಮೆಂಡನ್, ದಿವಾಕರ ಮೆಂಡನ್ ಮತ್ತು ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್ ಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಉದಯ್ ಕುಮಾರ್, ಸಹಾಯಕ ಅಭಿಯಂತರ ಜಯರಾಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…