Featured

ಕಾಪು ಹೊಸ ಮಾರಿಗುಡಿ: ಸನ್ಮಾನ ಸಮಾರಂಭ – vishwanews24

ಕಾಪು ಹೊಸಮಾರಿಗುಡಿ: ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಸನ್ಮಾನ ಸಮಾರಂಭ

ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿಯವರು ಅಮ್ಮನ ಆಲಯದಲ್ಲಿ ಸುಧೀರ್ಘ ಸಮಯದಿಂದ ,ಪೌರೋಹಿತ್ಯದಿಂದ ಮೊದಲ್ಗೊಂಡು ಸ್ವಚ್ಛತೆಯ ತನಕದ ಸೇವೆಯಲ್ಲಿ ತೊಡಗಿ, ಮಾರಿಗುಡಿಯನ್ನು ದೇಶದ ಪ್ರಧಾನ ಶ್ರದ್ಧಾ ಕೇಂದ್ರವನ್ನಾಗಿ ರೂಪಿಸುವಲ್ಲಿ ಕಾರಣಕರ್ತರಾಗಿದ್ದೀರಿ,ನಿಮ್ಮ ಕರ್ತವ್ಯ ನಿಷ್ಠೆ ಆದರ್ಶಪ್ರಾಯವಾದುದು ಎಂಬ ಸಂದೇಶವನ್ನು ನೀಡಿದರು.

ಹೊಸಮಾರಿಗುಡಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಯವರು ತಮ್ಮ ನಿಸ್ವಾರ್ಥ ಸೇವೆಗೆ ಅಮ್ಮನ ಅನುಗ್ರಹವಿರಲಿ,ಮುಂದೆಯೂ ಇಂತಹ ಸೇವಾ ಮನೋಭಾವನೆ ತಮ್ಮಲ್ಲಿ ಇರಲಿ, ಅಭಿವೃದ್ಧಿ ಸಮಿತಿಯನ್ನು ಜೊತೆ ಸೇರಿಸಿಕೊಂಡು ಆಯೋಜಿಸಿ ನೀಡಿದ ಈ ಸನ್ಮಾನ ಪ್ರಶಂಸನೀಯವಾದುದು ಎಂಬ ಮಾತುಗಳನ್ನಾಡಿದರು.

ಪ್ರಧಾನ ಅರ್ಚಕರಾದ ಶ್ರೀನಿವಾಸ ತಂತ್ರಿ,ಉಚ್ಚಂಗಿ ಗುಡಿಯ ಅರ್ಚಕರಾದ ರಾಘು ಗೌಡ,ಕಾರ್ಯಾಲಯ ಪ್ರಮುಖರಾದ ಗೋವರ್ಧನ ಸೇರಿಗಾರ, ಲಕ್ಷ್ಮಣ ಶೆಟ್ಟಿ,ಸಂತೋಷ ಶೆಟ್ಟಿ, ವಾದನ ಸೇವೆಯಲ್ಲಿ ತೊಡಗಿಕೊಂಡಿರುವ ಲೋಕು ಸೇರಿಗಾರ್,ವಾಸು ಸೇರಿಗಾರ್,ಚಂದ್ರಶೇಖರ ಸೇರಿಗಾರ್, ಸ್ವಚ್ಛತಾ ಸೇವೆಯಲ್ಲಿ ತೊಡಗಿಕೊಂಡಿರುವ ರಾಧಾ, ಹಾಗೂ ಮಾರಿಗುಡಿಯ ಗೊಂಬೆ ತಯಾರಕರಾಗಿದ್ದ ವಾಮನ ಆಚಾರ್ಯ ಇವರೆಲ್ಲರೂ ಸನ್ಮಾನವನ್ನು ಸ್ವೀಕರಿಸಿದರು.
ಸಮಾರಂಭದಲ್ಲಿ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್,ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಶೇಖರ ಸಾಲ್ಯಾನ್,ರವೀಂದ್ರ ಮಲ್ಲಾರು,ಮನೋಹರ ರಾವ್ ಕಲ್ಯಾ, ಜಯಲಕ್ಷ್ಮಿ ಎಸ್.ಶೆಟ್ಟಿ,ಚರಿತ ದೇವಾಡಿಗ,ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ ಉಪಸ್ಥಿತರಿದ್ದರು.ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಸಾಂಸ್ಕೃತಿಕ ಸಮಿತಿಯ ನಿರ್ದೇಶಕರಾದ ಮಾಧವ ಆರ್.ಪಾಲನ್ ಸ್ವಾಗತಿಸಿದರು. ದಂಡತೀರ್ಥ ವಿದ್ಯಾಸಂಸ್ಥೆಯ ಶಿಕ್ಷಕ ಶಿವಣ್ಣ ಬಾಯರ್ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು .

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

8 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

8 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

9 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

9 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago