Featured

ಕಾಪು ಹೊಸ ಮಾರಿಗುಡಿಯ ರಾಜ್ಯ ಸರಕಾರ ನೇಮಿಸಿದ ವ್ಯವಸ್ಥಾಪನ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಬಾರಿ ಅನ್ಯಾಯ : ನವೀನ್ ಎಸ್.ಕೆ – vishwanews24

ಕಾಪು ಹೊಸ ಮಾರಿಗುಡಿಯ ರಾಜ್ಯ ಸರಕಾರ ನೇಮಿಸಿದ ವ್ಯವಸ್ಥಾಪನ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಬಾರಿ ಅನ್ಯಾಯ : ನವೀನ್ ಎಸ್.ಕೆ

ಇತ್ತೀಚೆಗೆ ನವೀಕೃತಗೊಂಡು ದೇಶ-ವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಹೊಸ ಮಾರಿಗುಡಿಯ ವ್ಯವಸ್ಥಾಪನ ಸಮಿತಿಯು ಮಾಜಿ ಸಚಿವರ ಶಿಫಾರಸ್ಸಿನ ಮೇರೆಗೆ ಆಯ್ಕೆಗೊಂಡಿರುತ್ತದೆ. ಸದ್ರಿ ಸಮಿತಿಯಲ್ಲಿ ಆಯ್ಕೆಗೊಂಡ ಮೊಗವೀರ ಸಮುದಾಯದ ಶ್ರೀಧರ್ ಕಾಂಚನ್‌ರವರ ಅಕಾಲಿಕ ನಿಧನದಿಂದ ಈ ಸ್ಥಾನ ತೆರವುಗೊಂಡಿರುತ್ತದೆ. ಸದ್ರಿ ಸ್ಥಾನಕ್ಕೆ ಮೊಗವೀರ ಸಮಾಜ ಬಾಂಧವರನ್ನೇ ಆಯ್ಕೆ ಮಾಡದೆ ಆಡಳಿತ ಪಕ್ಷದ ಮಾಜಿ ಸಚಿವರಿಂದ ಅನ್ಯಾಯವಾಗಿರುತ್ತದೆ.

ಈ ಸಂಬಂಧ ಪಕ್ಷಾಂತರಿಯಾದಂತಹ ಕಿರಣ್ ಕುಮಾರ್‌ರವರು ಸ್ಥಳೀಯ ಜನಪ್ರತಿನಿಧಿಯಿಂದ ಮೊಗವೀರರ ಅವಗಣನೆ ಎಂದು ಬಾಲಿಷ ಹೇಳಿಕೆ ನೀಡಿರುತ್ತಾರೆ. ಮಾಜಿ ಸಚಿವರು ಕ್ಷೇತ್ರದ ಎ, ಬಿ, ಸಿ ಗ್ರೇಡ್ ದೇವಸ್ಥಾನಗಳ ವ್ಯವಸ್ಥಾಪನಾ  ಸಮಿತಿಗೆ ತನ್ನ ಹಿಂಬಾಲಕರನ್ನೇ ಆಯ್ಕೆ ಮಾಡಿ ಹಿಂದೂ ದೇವಸ್ಥಾನಗಳಲ್ಲಿ ರಾಜಕೀಯಗೊಳಿಸುತ್ತಿರುವುದು ಈತನಿಗೆ ತಿಳಿದಿಲ್ಲವೇ, ಸದಾ ಪಕ್ಷಾಂತರ ಮಾಡಿಕೊಂಡು ನಾಯಕರ ಓಲೈಕೆ ಮಾಡಿಕೊಂಡು ತನ್ನ ಬೇಳೆ ಬೇಯಿಸಿಕೊಳ್ಳುತ್ತಿರುವ ಈತನಿಗೆ ಸಂಘಟಿತ ಮೊಗವೀರ ಸಮಾಜಕ್ಕೆ ತಪ್ಪು ಅಭಿಪ್ರಾಯ ನೀಡುವುದೇ ಈತನ ಚಾಳಿಯಾಗಿರುತ್ತದೆ.

ರಾಜ್ಯದ ಆಡಳಿತ ಪಕ್ಷದ ಪ್ರತಿನಿಧಿಗಳಿಂದ ಶಿಫಾರಸ್ಸು ಪತ್ರ ನೀಡಿದಲ್ಲಿ ಮಾತ್ರ ಈ ಆಯ್ಕೆ ನಡೆಯುತ್ತದೆ. ಈ ಆಯ್ಕೆ ಮಾಜಿ ಸಚಿವರ ನೇತೃತ್ವದಲ್ಲಿ ನಡೆದಿದ್ದು ಜಗಜಾಹಿರ, ಮೊಗವೀರ ಸಮಾಜ ತನ್ನ ಪ್ರಾತಿನಿಧ್ಯವನ್ನು ಕೇಳಿಕೊಂಡಾಗ ಈ ರೀತಿ ಪಕ್ಷಾಂತರಿಗಳಿಂದ ಹೇಳಿಕೆ ನೀಡಿಸುತ್ತಿರುವುದು ಹಾಸ್ಯಾಸ್ಪದ. ಕಾಪು ವಿಧಾನಸಭಾ ಕ್ಷೇತ್ರದ ಎಲ್ಲಾ ದೇವಸ್ಥಾನಗಳಲ್ಲಿ ತನ್ನ ಹಿಂಬಾಲಕರನ್ನೇ ಆಯ್ಕೆ ಮಾಡಬೇಕೆಂದು ತಾಕೀತು ಮಾಡುವ ಮಾಜಿ ಸಚಿವರಿಗೆ ಈ ಆಯ್ಕೆ ತನ್ನ ಗಮನಕ್ಕೆ ಬಾರದೆ ತನ್ನದೇ ಪಕ್ಷದ ವಿಧಾನಪರಿಷತ್‌ ಸದಸ್ಯರೇ ಆಯ್ಕೆ ಮಾಡಿದ್ದಾರೆ ಎಂದು ಹೇಳಿಕೆ ನೀಡುವುದು ತಮ್ಮದೇ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ನಿದರ್ಶನ.

ಸತತ ಎರಡು ಚುನಾವಣೆಯಲ್ಲಿ ಸೋತು ಹತಾಶೆಯಿಂದ ಇನ್ನೂ ಹೊರಬರದ ಮಾಜಿ ಸಚಿವರು ಏನು ಕಿಮ್ಮತ್ತು ಇಲ್ಲದ ಪಕ್ಷಾಂತರಿಗಳಿಂದ ಹೇಳಿಕೆ ನೀಡಿಸುತ್ತಿರುವುದು ಖಂಡನೀಯ. ಎಂದು ನವೀನ್ ಎಸ್‌.ಕೆ  ಬಿಜೆಪಿ ಮಂಡಲ ಕಾಪು ಇವರು ಪತ್ರಿಕಾ ಪ್ರಕಟನೆ ಹೊರಡಿಸಿದ್ದಾರೆ.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

9 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

12 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

12 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

13 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

13 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

13 hours ago