Featured

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಮಾರಿಯಮ್ಮ ದೇವಿ, ಉಚ್ಚಂಗಿ ಗುಡಿಯಲ್ಲಿ ವಿವಿಧ ಸಮಿತಿ ಮತ್ತು ಸಮಾಜ ಭಾಂಧವರ ಮೂಲಕ ಪುಷ್ಪಾರ್ಚನೆ- vishwanews24

ಕಾಪು ಹೊಸ ಮಾರಿಗುಡಿ ದೇವಸ್ಥಾನ : ಮಾರಿಯಮ್ಮ ದೇವಿ, ಉಚ್ಚಂಗಿ ಗುಡಿಯಲ್ಲಿ ವಿವಿಧ ಸಮಿತಿ ಮತ್ತು ಸಮಾಜ ಭಾಂಧವರ ಮೂಲಕ ಪುಷ್ಪಾರ್ಚನೆ.

ಕಾಪು : ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಪ್ರಥಮ ಹಂತದಲ್ಲಿ ಆಯೋಜಿಸಲಾಗಿದ್ದ ಶಿಲಾ ಸೇವೆ ಸಮರ್ಪಣೆ ಮತ್ತು ಪುಷ್ಪಾರ್ಚನೆಯ ಪ್ರಯುಕ್ತ ಬುಧವಾರ ಸಂಜೆ ವಿವಿಧ ಸಮಿತಿ ಮತ್ತು ಸಮಾಜ ಭಾಂಧವರ ಮೂಲಕ ಮಾರಿಯಮ್ಮ ದೇವಿ ಮತ್ತು ಉಚ್ಚಂಗಡಿ ದೇವಿಯ ಯೋಜಿತ ಗರ್ಭಗುಡಿಗೆ ಸಾಮೂಹಿಕ ಪುಷ್ಪಾರ್ಚನೆ ನಡೆಸಿ, ಪ್ರಾರ್ಥನೆ ಸಲ್ಲಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ / ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಹೊಸ ಮಾರಿಗುಡಿ ಸಮಗ್ರ ಅಭಿವೃದ್ಧಿ ಕುರಿತಾದ ಹಲವು ವರ್ಷಗಳ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ವಿವಿಧ ಸಿದ್ಧತೆಗಳನ್ನು ನಡೆಸಿದ್ದು ಅದರ ಪ್ರಯುಕ್ತ ಶಿಲಾ ಸೇವೆ ಸಮರ್ಪಣೆಗೆ ಚಾಲನೆ ನೀಡಲಾಗಿದೆ. ಶಿಲಾ ಸೇವೆ ಸಹಿತವಾಗಿ ಭಕ್ತಾ„ಗಳ ತನು, ಮನ, ಧನ ರೂಪದ ಸಹಕಾರದೊಂದಿಗೆ ಮುಂದಿನ ಸುಗ್ಗಿ ಮಾರಿಪೂಜೆಯ ಸಂದರ್ಭದಲ್ಲೇ ಮಾರಿಯಮ್ಮ ಮತ್ತು ಉಚ್ಚಂಗಿ ಗುಡಿಯನ್ನು ಸಮರ್ಪಿಸಲು ಪ್ರಯತ್ನಿಸಲಾಗುವುದು ಎಂದರು.
ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಹೊಸ ಮಾರಿಗುಡಿಯ ನವ ನಿರ್ಮಾಣ – ಪುನರುತ್ಥಾನಕ್ಕೆ ಎಲ್ಲರ ದೇಣಿಗೆಯೂ ಸಮರ್ಪಿತವಾಗಬೇಕೆಂಬ ಚಿಂತನೆಯೊಂದಿಗೆ ಶಿಲಾ ಸೇವೆ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು 9 ತಿಂಗಳಲ್ಲಿ 9 ಲಕ್ಷ ಸಂಖ್ಯೆಯ ಶಿಲಾ ಸೇವೆಯನ್ನು ಸಮರ್ಪಿಸಲು ಸಂಕಲ್ಪಿಸಲಾಗಿದೆ. ಭಕ್ತರಿ ನಿರಂತರವಾಗಿ ಶಿಲಾ ಸೇವೆ ಸಮರ್ಪಣೆಗೆ ಅವಕಾಶ ನೀಡಲಾಗುತ್ತಿದ್ದು ಪ್ರತೀ ಮಂಗಳವಾರವೂ ಮಾರಿಗುಡಿಗೆ ಭೇಟಿ ನೀಡಿ ತಮ್ಮ ಶಕ್ತ್ಯಾನುಸಾರ ಶಿಲಾ ಸೇವೆಯನ್ನು ಸಮರ್ಪಿಸಬಹುದಾಗಿದೆ ಎಂದರು.
ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ರಚಿತಗೊಂಡ ಆರ್ಥಿಕ ಸಮಿತಿ, ಪ್ರಚಾರ ಸಮಿತಿ, ಸ್ವಯಂ ಸೇವಕರ ಸಮಿತಿಯ ಪ್ರಧಾನ ಸಂಚಾಲಕರ ನೇತೃತ್ವದಲ್ಲಿ ಸಂಚಾಲಕರುಗಳು ಮತ್ತು ಸದಸ್ಯರುಗಳು ತ್ರಿಕರಣ ಪೂರ್ವಕವಾಗಿ ಹಗಲು ರಾತ್ರಿ ಸೇವೆ ಸಲ್ಲಿಸಿದ ಪರಿಣಾಮವಾಗಿ ಶಿಲಾ ಸೇವೆ ಸಮರ್ಪಣಾ ಕಾರ್ಯಕ್ರಮ ಯಶಸ್ವಿಯಾಗಿ ಜರಗುವಂತಾಗಿದೆ. ಮುಂದೆಯೂ ಎಲ್ಲರೂ ಜೊತೆಗೂಡಿ ಕಾರ್ಯ ನಿರ್ವಹಿಸೋಣ ಎಂದರು.
ಕಾಪು ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಕಾರ್ಯ ನಿರ್ವಹಣಾ„ಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಪ್ರಧಾನ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ್ ಶೆಟ್ಟಿ ಕಾಪು, ಗಂಗಾಧರ ಸುವರ್ಣ, ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಅಮೀನ್, ಜಗದೀಶ್ ಬಂಗೇರ, ರವೀಂದ್ರ ಎಂ., ರೇಣುಕಾ ದೇವಾಡಿಗ, ಶೈಲಜಾ ಪುರುಷೋತ್ತಮ್, ಬಾಬು ಮಲ್ಲಾರು, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಜಿ. ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಪತ್ರಕರ್ತ ರಾಕೇಶ್ ಕುಂಜೂರು,  ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಪದಾ„ಕಾರಿಗಳು, ಆರ್ಥಿಕ ಸಮಿತಿ ಮತ್ತು ಪ್ರಚಾರ ಸಮಿತಿಯ ಸಂಚಾಲಕರುಗಳು, ವಿವಿಧ ಸಮಾಜಗಳ ಪ್ರತಿನಿ„ಗಳು ಮತ್ತು ಕಾಪು ಸಾವಿರ ಸೀಮೆಯ ಹತ್ತು ಸಮಸ್ತರು ಉಪಸ್ಥಿತರಿದ್ದರು. ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

13 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

14 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

15 hours ago