Featured

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮೊಗವೀರ ಪ್ರತಿನಿಧಿಯನ್ನು ಅತಿ ಶೀಘ್ರವಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ನೀಡುವಂತೆ ಆಗ್ರಹ  : ಜಿತೇಂದ್ರ ಶೆಟ್ಟಿ ಉದ್ಯಾವರ – vishwanews24

ಕಾಪು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮೊಗವೀರ ಪ್ರತಿನಿಧಿಯನ್ನು ಅತಿ ಶೀಘ್ರವಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ನೀಡುವಂತೆ ಆಗ್ರಹ  : ಜಿತೇಂದ್ರ ಶೆಟ್ಟಿ ಉದ್ಯಾವರ

ಇತಿಹಾಸ ಪ್ರಸಿದ್ಧವಾದ ಹಿಂದೂ ಧರ್ಮದ ಎಲ್ಲಾ ಜಾತಿ ಬಾಂಧವರ ಆರಾಧ್ಯ ಕ್ಷೇತ್ರವಾಗಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನವು ಊರ ಮತ್ತು ಪರವೂರ ಭಕ್ತರ ನೆರವಿನಿಂದ ಭವ್ಯ ಮಂದಿರದ ನಿರ್ಮಾಣಗೊಂಡ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುತ್ತದೆ. ಈ ದೇವಸ್ಥಾನಕ್ಕೆ ಸರಕಾರ ವ್ಯವಸ್ಥಾಪನ ಸಮಿತಿಯನ್ನು ಮಾಜಿ ಸಚಿವರ ಶಿಫಾರಸ್ಸಿನ ಮೇರೆಗೆ ರಚಿಸಿದ್ದು ಸದ್ರಿ ಸಮಿತಿಯಲ್ಲಿ ಮೊಗವೀರ ಸಮಾಜದ ಸಜ್ಜನ ಶ್ರೀಧರ್ ಕಾಂಚನ್‌ರವರು ನೇಮಕಗೊಂಡಿದ್ದು, ತದ ನಂತರ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ. ಇವರ ತೆರವಾದ ಸ್ಥಾನಕ್ಕೆ ಇದೇ ಸಮಾಜದ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕಾಗಿದ್ದು ಸಾಮಾಜಿಕ ನ್ಯಾಯವಾಗಿರುತ್ತದೆ. ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಧಾರ್ಮಿಕತೆಯನ್ನೇ ಮೈಗೂಡಿಸಿಕೊಂಡು ಬಂದ ಮೊಗವೀರ ಸಮಾಜದ ಪ್ರತಿನಿಧಿಗೆ ಅವಕಾಶ ನೀಡದೆ ಬೇರೆ ಜಾತಿಯ ಪ್ರತಿನಿಧಿಯನ್ನು ರಾಜ್ಯ ಸರಕಾರದ ಸದಸ್ಯ ಕಾರ್ಯದರ್ಶಿ ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಬೆಂಗಳೂರು ಆದೇಶಿಸಿರುವುದು ಖಂಡನೀಯ.

ಕಾಪು ಕ್ಷೇತ್ರದ ಎಲ್ಲಾ ದೇವಸ್ಥಾನ ಮತ್ತು ಅಧಿಕಾರಿ ವರ್ಗವನ್ನು ತನ್ನ ಶಿಫಾರಸ್ಸಿನಂತೆ ಕಾರ್ಯನಿರ್ವಹಿಸಬೇಕೆಂದು ಸೂಚಿಸುತ್ತಿರುವ ಮಾಜಿ ಸಚಿವರಿಗೆ ಹೊಸಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕವನ್ನು ಕಾಂಗ್ರೆಸ್ ಸರಕಾರವೇ ನಿಯುಕ್ತಿಗೊಳಿಸಿದ್ದು ತಿಳಿದಿಲ್ಲ ಎನ್ನುವಂತಹದ್ದು ನಂಬಲು ಸಾಧ್ಯವೇ? ಅಲ್ಲದೇ, ಕೆಲವು ಕಾಂಗ್ರೆಸ್ ನಾಯಕರುಗಳು ಕಾಂಗ್ರೆಸ್ ಪಕ್ಷದ ನಾಯಕರ ಒಣ ಪ್ರತಿಷ್ಠೆಯಿಂದ ಈ ನೇಮಕ ನಡೆದಿದೆ ಎಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷದ ಯಾವ ನಾಯಕರು ಈ ಒಣ ಪ್ರತಿಷ್ಠೆಯಿಂದ ದೊಡ್ಡ ಸಮುದಾಯವಾದ ಮೊಗವೀರ ಸಮಾಜವನ್ನ ಅವಗಣಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಕಾಂಗ್ರೆಸ್ ಪಕ್ಷದ ಭಿನ್ನಾಭಿಪ್ರಾಯದಿಂದ ಮತ್ತು ನಾಯಕರ ಹೊಂದಾಣಿಕಾ ಕೊರತೆಯಿಂದಾಗಿ ಇಂತಹ ಹೇಳಿಕೆಗಳನ್ನು ನೀಡಿ ಹಿಂದೂ ಧರ್ಮದ ಏಕತೆಯಲ್ಲಿ ಜಾತಿ-ಜಾತಿಗಳ ನಡುವೆ ವೈಮನಸ್ಸನ್ನ ಮೂಡಿಸುವ ಬದಲು ಮೊಗವೀರ ಸಮಾಜದ ಪ್ರತಿನಿಧಿಯನ್ನು ಶೀಘ್ರವಾಗಿ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೇಮಿಸಿ ರಾಜ್ಯ ಸರಕಾರದಿಂದ ಆದೇಶಿಸುವಂತೆ ವಿನಂತಿಸುತ್ತೇವೆ. ಇಲ್ಲವಾದಲ್ಲಿ ಮೊಗವೀರ ಮಹಾಸಭಾ ಕೈಗೊಳ್ಳುವ ನಿರ್ಣಯಕ್ಕೆ ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಸಂಪೂರ್ಣ ಬೆಂಬಲವನ್ನ ನೀಡಲಿದೆ ಎಂದು ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

51 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

1 hour ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

1 hour ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

24 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago